ಗುಜರಾತ್‌ನಲ್ಲಿ ಬಿಜೆಪಿ ಓಟಕ್ಕೆ ದಾಖಲೆ ಉಡೀಸ್, ಹಿಮಾಚಲದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್, ಇಲ್ಲಿದೆ ಗೆಲುವಿನ ಕಾರಣ!

ಗುಜರಾತ್‌ನಲ್ಲಿ ಬಿಜೆಪಿ ಓಟಕ್ಕೆ ದಾಖಲೆ ಉಡೀಸ್, ಹಿಮಾಚಲದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್, ಇಲ್ಲಿದೆ ಗೆಲುವಿನ ಕಾರಣ!

Published : Dec 08, 2022, 10:49 PM IST

ಗುಜರಾತ್‌ ಸಂಪೂರ್ಣ ಕೇಸರಿ ಮಯ, ದಾಖಲೆ ಗೆಲುವಿಗೆ ಮೋದಿ ಅಭಿನಂದನೆ,  ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಬಿಟ್ಟುಕೊಟ್ಟ ಬಿಜೆಪಿ,  ಗುಜರಾತ್‌ನಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನಕ್ಕೆ ಕಾರಣವೇನು?ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 156 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ಗುಜರಾತ್ ರಾಜಕೀಯ ಇತಿಹಾಸದಲ್ಲಿ ಬಿಜೆಪಿಯ ಹೊಸ ಅಧ್ಯಾಯ ಬರೆದಿದೆ. ಗುಜರಾತ್ ಚುನಾವಣೆ ಗೆಲುವಿನ ಹಿಂದೆ ಪ್ರಧಾನಿ ಮೋದಿ ಜನಪ್ರಿಯತೆ ಹಾಗೂ ವಿಶ್ವಾಸಾರ್ಹತೆ ಪ್ರಮುಖ ಕಾರಣವಾಗಿದೆ. ಇದರ ಜೊತೆ ಮತ್ತೆ ಮೂರು ಕಾರಣಗಳಿವೆ. ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಳೆದ ಬಾರಿ 44 ಸ್ಥಾನ ಗೆದ್ದು ಅಧಿಕಾರ ಹಿಡಿದಿದ್ದ ಬಜೆಪಿ  ಈ ಬಾರಿ 25 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ತವರು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ವಿಫಲವಾಗಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. 17 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಗುಜರಾತ್‌ನಲ್ಲಿ ಮೋದಿ 36 ರ್ಯಾಲಿ ಮಾಡಿದ್ದರೆ, ಅಮಿತ್ ಶಾ 40ಕ್ಕೂ ಹೆಚ್ಚು ರ್ಯಾಲಿ ಮಾಡಿದ್ದಾರೆ. ಇತ್ತ ರಾಹುಲ್ ಗಾಂಧಿ ಹೆಸರಿಗೆ ಮಾತ್ರ 2 ರ್ಯಾಲಿ ಮಾಡಿ ಮತ್ತೆ ಗುಜರಾತ್‌ ಕಡೆ ಮುಖ ಮಾಡಿಲ್ಲ. ಇದರ ಜೊತೆಗೆ ಇನ್ನೂ ಇದೆ ಸೋಲಿಗೆ ಕಾರಣ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more