ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

Published : Mar 23, 2023, 01:03 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. 

ಶಿವಮೊಗ್ಗ (ಮಾ.23): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. ಶಾಂತವೇರಿ ಗೋಪಾಲಗೌಡರು, ಜೆ.ಹೆಚ್.ಪಟೇಲರು, ಬಂಗಾರಪ್ಪ, ಕಾಗೋಡು ತಿಮ್ಮಪ್ಪರಂತಹ ಸಮಾಜವಾದಿ ನೆಲೆಗಟ್ಟಿನ ರಾಜಕಾರಣಿಗಳಿಗೆ ಒಂದು ನೆಲೆಯನ್ನು ಒದಗಿಸಿ ಕೊಟ್ಟಿತ್ತು ಶಿವಮೊಗ್ಗ. ಆದರೆ 1988-89ರ ನಂತರ ಶಿವಮೊಗ್ಗ ಹಿಂದುತ್ವದ ಪ್ರಯೋಗ ಶಾಲೆಯಾಗಿ ಪರಿವರ್ತನೆಯಾಯಿತು. ಒಂದು ಕಡೆ ಯಡಿಯೂರಪ್ಪನವರ ಸತತ ರೈತಪರ ಹೋರಾಟಗಳು ಇನ್ನೊಂದು ಕಡೆ ಹಿಂದುಳಿದ ವರ್ಗದಿಂದ ಬಂದ ಹಿಂದುತ್ವದ ನಾಯಕನಾಗಿ ಈಶ್ವರಪ್ಪನವರು ಮತ್ತು ಸಂಘಪರಿವಾರದ ಸತತ ಚಟುವಟಿಕೆಗಳ ಕಾರಣದಿಂದ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಈಶ್ವರಪ್ಪನವರು ಮೊದಲಬಾರಿಗೆ ಶಿವಮೊಗ್ಗದಲ್ಲಿ ಗೆದಿದ್ದು, 1989ರಲ್ಲಿ. ಅಲ್ಲಿಯವರೆಗೂ ಶಿವಮೊಗ್ಗ ನಗರ ಒಂದು ರೀತಿ ಬಂಗಾರಪ್ಪನವರ ಕಾರಣದಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು.

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more