ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

Published : Mar 23, 2023, 01:03 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. 

ಶಿವಮೊಗ್ಗ (ಮಾ.23): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. ಶಾಂತವೇರಿ ಗೋಪಾಲಗೌಡರು, ಜೆ.ಹೆಚ್.ಪಟೇಲರು, ಬಂಗಾರಪ್ಪ, ಕಾಗೋಡು ತಿಮ್ಮಪ್ಪರಂತಹ ಸಮಾಜವಾದಿ ನೆಲೆಗಟ್ಟಿನ ರಾಜಕಾರಣಿಗಳಿಗೆ ಒಂದು ನೆಲೆಯನ್ನು ಒದಗಿಸಿ ಕೊಟ್ಟಿತ್ತು ಶಿವಮೊಗ್ಗ. ಆದರೆ 1988-89ರ ನಂತರ ಶಿವಮೊಗ್ಗ ಹಿಂದುತ್ವದ ಪ್ರಯೋಗ ಶಾಲೆಯಾಗಿ ಪರಿವರ್ತನೆಯಾಯಿತು. ಒಂದು ಕಡೆ ಯಡಿಯೂರಪ್ಪನವರ ಸತತ ರೈತಪರ ಹೋರಾಟಗಳು ಇನ್ನೊಂದು ಕಡೆ ಹಿಂದುಳಿದ ವರ್ಗದಿಂದ ಬಂದ ಹಿಂದುತ್ವದ ನಾಯಕನಾಗಿ ಈಶ್ವರಪ್ಪನವರು ಮತ್ತು ಸಂಘಪರಿವಾರದ ಸತತ ಚಟುವಟಿಕೆಗಳ ಕಾರಣದಿಂದ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಈಶ್ವರಪ್ಪನವರು ಮೊದಲಬಾರಿಗೆ ಶಿವಮೊಗ್ಗದಲ್ಲಿ ಗೆದಿದ್ದು, 1989ರಲ್ಲಿ. ಅಲ್ಲಿಯವರೆಗೂ ಶಿವಮೊಗ್ಗ ನಗರ ಒಂದು ರೀತಿ ಬಂಗಾರಪ್ಪನವರ ಕಾರಣದಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more