ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

Published : Mar 23, 2023, 01:03 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. 

ಶಿವಮೊಗ್ಗ (ಮಾ.23): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. ಶಾಂತವೇರಿ ಗೋಪಾಲಗೌಡರು, ಜೆ.ಹೆಚ್.ಪಟೇಲರು, ಬಂಗಾರಪ್ಪ, ಕಾಗೋಡು ತಿಮ್ಮಪ್ಪರಂತಹ ಸಮಾಜವಾದಿ ನೆಲೆಗಟ್ಟಿನ ರಾಜಕಾರಣಿಗಳಿಗೆ ಒಂದು ನೆಲೆಯನ್ನು ಒದಗಿಸಿ ಕೊಟ್ಟಿತ್ತು ಶಿವಮೊಗ್ಗ. ಆದರೆ 1988-89ರ ನಂತರ ಶಿವಮೊಗ್ಗ ಹಿಂದುತ್ವದ ಪ್ರಯೋಗ ಶಾಲೆಯಾಗಿ ಪರಿವರ್ತನೆಯಾಯಿತು. ಒಂದು ಕಡೆ ಯಡಿಯೂರಪ್ಪನವರ ಸತತ ರೈತಪರ ಹೋರಾಟಗಳು ಇನ್ನೊಂದು ಕಡೆ ಹಿಂದುಳಿದ ವರ್ಗದಿಂದ ಬಂದ ಹಿಂದುತ್ವದ ನಾಯಕನಾಗಿ ಈಶ್ವರಪ್ಪನವರು ಮತ್ತು ಸಂಘಪರಿವಾರದ ಸತತ ಚಟುವಟಿಕೆಗಳ ಕಾರಣದಿಂದ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಈಶ್ವರಪ್ಪನವರು ಮೊದಲಬಾರಿಗೆ ಶಿವಮೊಗ್ಗದಲ್ಲಿ ಗೆದಿದ್ದು, 1989ರಲ್ಲಿ. ಅಲ್ಲಿಯವರೆಗೂ ಶಿವಮೊಗ್ಗ ನಗರ ಒಂದು ರೀತಿ ಬಂಗಾರಪ್ಪನವರ ಕಾರಣದಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more