ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಬಜರಂಗದಳ ಆಕ್ರೋಶ

ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಬಜರಂಗದಳ ಆಕ್ರೋಶ

Published : May 03, 2023, 07:10 PM IST

ಬಜರಂಗದಳವನ್ನು ನಿಷೇಧ ಮಾಡುವುದಾಗಿ ಹೇಳಿದ ಕಾಂಗ್ರೆಸ್‌ ವಿರುದ್ಧ ವಿವಿಧೆಡೆ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್‌ ಪ್ರಣಾಳಿಕೆಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು. ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ.

ಬೆಂಗಳೂರು (ಮೇ 3): ಭಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಹಿಂದೂ ಮುಖಂಡರು ಕೆಂಡ ಕಾರಿದ್ದು, ರಾಜ್ಯಾದ್ಯಂತ ಕಾಂಗ್ರೆಸ್ ಸೋಲಿಸಲು ಫೀಲ್ಡಿಗಿಳಿಯಲು ಭಜರಂಗದಳ ಕರೆ ನೀಡಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ.

ನಿನ್ನೆ ಮಂಗಳೂರು ನಗರದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ. ಭಜರಂಗದಳ ನಿಷೇಧ ಕುರಿತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪ ವಿಚಾರವಾಗಿ, ಮಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಭಜರಂಗದಳ ಪ್ರತಿಭಟನೆ ಮಾಡಲಾಗಿದೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿದ್ದು, ಇದು ಇದೀಗ ಕೇಸರಿ ಪಡೆಗೆ ಅಸ್ತ್ರವಾಗಿದೆ. ಅಲ್ಲದೇ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಭಜರಂಗದಳ ಅಭಿಯಾನ ಆರಂಭಿಸಿದ್ದು, ನಾಳೆ ಸಂಜೆ ಏಳು ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ.

ಈ ಮೂಲಕ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ ಸಿಕ್ಕಂತಾಗಿದೆ. ಇನ್ನೂ ಈ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಅವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಇದು ಅವರ ತಿರುಕನ ಕನಸು, ಬಂದ್ರೆ ತಾನೇ ಬ್ಯಾನ್‌ ಮಾಡೋದು ಎಂದು ಬಿಎಸ್‌ವೈ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more