CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!

Jan 15, 2021, 4:01 PM IST

ಬೆಂಗಳೂರು (ಜ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಿಡಿ ಬಾಂಬ್ ಸಿಡಿಸಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಿ.ಡಿ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ಕೆಲವರು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದು, ಆ ಸಿ.ಡಿ. ಸಂಕ್ರಾಂತಿ ನಂತರ ಸಿಡಿಯಬಹುದು ಎಂದು ಹೇಳಿಕೆ ನೀಡಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ. ನಾಳೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸೈಲೆಂಟ್ ಆಗಿರಬಹುದು ಎನ್ನಲಾಗಿದೆ. 

ಹೊಸ ಸಂಪುಟ: ಯಡಿಯೂರಪ್ಪಗೆ ತಂದೊಡ್ಡಿದ ಹೊಸ ಸಂಕಟ..?