ಆರು ತಿಂಗಳ ಆಟ..ಯಾರು ಆಟಗಾರ..?ಯಾರು ಸೂತ್ರಧಾರ..? ರಾಜ್ಯದಲ್ಲೂ ನಡೆಯಲಿದ್ಯಾ 'ಮಹಾ'ಚದುರಂಗದಾಟ..?

ಆರು ತಿಂಗಳ ಆಟ..ಯಾರು ಆಟಗಾರ..?ಯಾರು ಸೂತ್ರಧಾರ..? ರಾಜ್ಯದಲ್ಲೂ ನಡೆಯಲಿದ್ಯಾ 'ಮಹಾ'ಚದುರಂಗದಾಟ..?

Published : Aug 15, 2023, 02:42 PM IST

ರಣರಂಗದಲ್ಲಿ ಮತ್ತೆ ಸದ್ದು ಮಾಡ್ತಿದೆ ಆಪರೇಷನ್ ಪಾಲಿಟಿಕ್ಸ್..!
ಕೈ ಸರ್ಕಾರದ ಬುಡಲ್ಲಿ ಕೇಸರಿ ಕಲಿಗಳ "ಟೈಂ ಬಾಂಬ್" ಫಿಕ್ಸ್..!
ಸರ್ಕಾರದ ಆಯಸ್ಸು, ಆಯಸ್ಸು ಆರೇ ತಿಂಗಳು ಎಂದ ಯತ್ನಾಳ್..!

ರಾಜ್ಯ ರಾಜಕಾರಣದಲ್ಲಿ ಒಂದು ಸಂಚಲನ ಸೃಷ್ಠಿಯಾಗಿದೆ. ಇದು ರಾಜಕೀಯ ಪಕ್ಷಗಳ ಪಡಸಾಲೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಅಧಿಕಾರದಲ್ಲಿರೋ ಸರ್ಕಾರವೊಂದನ್ನು ಮಕಾಡೆ ಮಲಗಿಸಿ, ಮತ್ತೊಂದು ಸರ್ಕಾರವನ್ನು ಅಧಿಕಾರಕ್ಕೆ ತರಬಲ್ಲ ತೆರೆಯ ಹಿಂದಿನ ಕಾರ್ಯಾಚರಣೆಯೇ ಈ ಆಪರೇಷನ್. ಕಳೆದ 15 ವರ್ಷಗಳಿಂದ ಕರ್ನಾಟಕದ ರಾಜಕೀಯ ರಣಕ್ಷೇತ್ರದಲ್ಲಿ ಆಪರೇಷನ್(Operation) ರಾಜಕಾರಣದ್ದೇ ಸದ್ದು. ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಪಾಲಿಟಿಕ್ಸ್ ಅದ್ಯಾವ ಪರಿ ನಡೆದಿದೆ ಅನ್ನೋದನ್ನೇ ರಾಜ್ಯದ ಜನತೆ ನೋಡಿದ್ದಾರೆ. ತುಂಬಾ ದೂರ ಹೋಗೋದೇನೂ ಬೇಡ. 2019ರಲ್ಲಿ ಬಿಜೆಪಿ(BJP) ಅಧಿಕಾರದ ಗದ್ದುಗೆ ಹಿಡಿದದ್ದೇ ಆಪರೇಷನ್ ಅಸ್ತ್ರದ ಮೂಲಕ. ಅವತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. ಈಗ ರಾಜ್ಯದಲ್ಲಿರೋದು ಕಾಂಗ್ರೆಸ್ (Congress) ಸರ್ಕಾರ. ಪ್ರಚಂಡ ಬಹುಮತದ ಕಾಂಗ್ರೆಸ್ ಸರ್ಕಾರ. 135+3, ಅಂದ್ರೆ ಕೈ ಸರ್ಕಾರಕ್ಕೆ 138 ಶಾಸಕರ ಬಲವಿದೆ. ಇಂಥಾ ಸರ್ಕಾರಕ್ಕೆ ಆಪರೇಷನ್ ಭಯ ಶುರುವಾಗಿದ್ಯಾ..? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ, ಕೇಸರಿ ಕಲಿ ಬಸನಗೌಡ ಪಾಟೀಲ್ ಯತ್ನಾಳ್(Basanagouda Patil Yatnal) ಸಿಡಿಸಿರೋ ಬಾಂಬ್.

ಇದನ್ನೂ ವೀಕ್ಷಿಸಿ: ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more