ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

ಇಂದು ಅಮಿತ್ ಶಾ ಭೇಟಿಯಾಗಲಿರುವ ಬೊಮ್ಮಾಯಿ: ಕೇಂದ್ರ ಗೃಹ ಸಚಿವರ ಜೊತೆ ಮಹತ್ವದ ಮಾತುಕತೆ

Published : Aug 08, 2023, 11:00 AM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಬೊಮ್ಮಾಯಿ 
ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ
ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ
 

ಬಿಜೆಪಿಯಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ. ಈ ಚರ್ಚೆಯ ಮಧ್ಯೆಯೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣೆ(Election) ಸೋಲಿನ ಬಳಿಕ ಮೊದಲ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಮಾಜಿ ಸಿಎಂ ತೆರಳಿದ್ದಾರೆ. ಇಂದು ಬಿಜೆಪಿ ವರಿಷ್ಠ ಅಮಿತ್ ಶಾ ಭೇಟಿಯಾಗಲಿದ್ದು, ಮಹತ್ವದ ಮಾತುಕತೆಯನ್ನು ಅಮಿತ್ ಶಾ-ಬೊಮ್ಮಾಯಿ ನಡೆಸಲಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರನ್ನು ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ರಾಜ್ಯದ ವಿದ್ಯಮಾನಗಳ ಕುರಿತು ಜೆಪಿ ನಡ್ಡಾ ಜೊತೆ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪೂರ್ವ ಸಿದ್ದತೆ ಕುರಿತಾಗಿಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ನಿನ್ನೆ ರಾಜ್ಯದ ಸಂಸದರು, ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದರು. 

ಇದನ್ನೂ ವೀಕ್ಷಿಸಿ:  ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more