ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

Nov 16, 2023, 11:43 PM IST

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.