ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

Published : Sep 03, 2023, 12:39 PM IST

ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್ ತಮ್ಮ ಕ್ಷೇತ್ರದ ಅಭಿವೃದ್ದಿ  ಕೆಲಸಕ್ಕಾಗಿ ಕಾಂಗ್ರೆಸ್ ಭೇಟಿ ಮಾಡಿದ್ದಾರಷ್ಟೆ. ಬಿಜೆಪಿಯಲ್ಲಿ ಬೇಸರವಿಲ್ಲ, ಕಾಂಗ್ರೆಸ್ ನವ್ರು ಯಾರೂ ಕೂಡ ನನ್ನನ್ನು ಮಾತಾಡಿಸಿಲ್ಲ ಎಂದು ಬಿ.ಸಿ. ಪಾಟೀಲ್‌ ಹೇಳಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಆಪರೇಷನ್‌ ಹಸ್ತ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕಿಚ್ಚ ಸುದೀಪ್‌ ಬರ್ತ್‌ ಡೇ ಪಾರ್ಟಿಯಲ್ಲಿ ಡಿ.ಕೆ.ಶಿವಕಮಾರ್‌, ಬಿ.ಸಿ. ಪಾಟೀಲ್‌ ಮತ್ತು ರಾಜೂಗೌಡ ಅವರ ಜೊತೆ ಮಾತನಾಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್‌(BC Patil) ಮಾತನಾಡಿ, ನಾನು ಮತ್ತೆ ಕಾಂಗ್ರೆಸ್‌ಗೆ(Congress) ಹೋಗಲ್ಲ ಎಂದಿದ್ದಾರೆ. ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ. ಕಾಂಗ್ರೆಸ್‌ಗೆ ಹೋಗ್ತೇನೆ ಅನ್ನೋದು ಸುಳ್ಳು. ಸುದೀಪ್(Sudeep) ಹುಟ್ಟುಹಬ್ಬ ಹಿನ್ನೆಲೆ ಡಿಕೆಶಿ ಬಂದಿದ್ರು. ನಾನು, ರಾಜೂಗೌಡ ಹೋಗಿದ್ವಿ. ನಾನು ಡಿಕೆಶಿ ಮೊದಲಿನಿಂದಲೂ ಸ್ನೇಹಿತರು, ಚುನಾವಣೆ ಬಳಿಕ ಡಿಕೆಶಿಯನ್ನು ನೋಡಿರಲಿಲ್ಲ. ಸೌಜನ್ಯಕ್ಕೆ ಮಾತನಾಡಿದ್ದೇವೆ ಅಷ್ಟೇ ಎಂದು ಹೇಳಿದರು. ಇದು ಆಕಸ್ಮಿಕ ಭೇಟಿ, ಬೇರೆ ಅರ್ಥ ಕಲ್ಪಿಸೋದು ಬೇಡ. ಡಿಸಿಎಂ ಸಿಕ್ಕಾಗ ಮುಖ ತಿರುಗಿಸಿ ಹೋಗೋದು ಸರಿಯಲ್ಲ. ಕನಸಲ್ಲೂ ಬಿಜೆಪಿ(BJP) ಬಿಡುವ ಬಗ್ಗೆ ಯೋಚಿಸಿಲ್ಲ. ಹಾವೇರಿಯಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇವೆ. ಅವ್ರು ಯಾವ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅನ್ನೋ ಅನುಮಾನ ಬರ್ತಿದೆ. ನಮ್ಮ ಬೆಂಬಲಿಗರು ಯಾರೂ ಕೂಡ ಕಾಂಗ್ರೆಸ್‌ಗೆ ಹೋಗಿಲ್ಲ, ಊಹಾಪೋಹವಷ್ಟೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ‘ಚಂದು’ ಸಿನಿಮಾದಲ್ಲಿ ‘ಕಿಚ್ಚ’ನ ‘ತುಂಟಾಟ’..! ಕರುನಾಡಿನ ಪಾಲಿಗೆ ‘ಪಾರ್ಥ’ನೆ ‘ಸ್ವಾತಿಮುತ್ತು’..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more