ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

Published : Oct 22, 2023, 03:36 PM IST

ಬೆಳಗಾವಿ ಸಚಿವರಾದ ಸೈಲೆಂಟ್‌ ಸಾಹುಕಾರ ಸತೀಶ್‌ ಜಾರಕಿಹೊಳಿ, ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ರಾಜಕೀಯ ಫೈಟ್‌ ಶುರುವಾಗಿದೆ. 

ಬೆಳಗಾವಿ (ಅ.22): ರಾಜಕೀಯ ರಣರಂಗದಲ್ಲಿ ಭುಗಿಲೆದ್ದ ಆಂತರ್ಯುದ್ಧ.. ಕುಂದಾನಗರಿ ಮಂತ್ರಿಗಳ ಮಧ್ಯೆ ಮೌನಯುದ್ಧ..! ಸೈಲೆಂಟೇ ಅಸ್ತ್ರ ಅಂದ್ರು ಸತೀಶ್ ಜಾರಕಿಹೊಳಿ..!ಮೌನವಾಗಿದ್ದೇನೆ ಅಂದ್ರೆ ಅದು ನನ್ನ ವೀಕ್ನೆಸ್ ಅಲ್ಲ ಅಂದ್ರು ಲಕ್ಷ್ಮೀ ಹೆಬ್ಬಾಳ್ಕರ್. ಲಕ್ಷ್ಮೀ ಹೆಬ್ಭಾಳ್ಕರ್ ಗೆದ್ದಿರೋದು ಎರಡನೇ ಬಾರಿ, ನಾನು ಆರು ಬಾರಿ ಗೆದ್ದವನು ಅಂದಿದ್ದೇಕೆ ಜಾರಕಿಹೊಳಿ. ಸೈಲೆಂಟ್ ಸಾಹುಕಾರ ಜಾರಕಿಹೊಳಿಗೂ.. ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಏನಿದು ದುಷ್ಮನಿ..? ಅವತ್ತು ರಮೇಶ್, ಇವತ್ತು ಸತೀಶ್.. ಹೆಬ್ಬಾಳ್ಕರ್ ವಿರುದ್ಧವೇ ಗುಟುರು ಹಾಕೋದ್ಯಾಕೆ ಜಾರಕಿಹೊಳಿ ಬ್ರದರ್ಸ್..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕಾಂಗ್ರೆಸ್'ನ ಆಂತರ್ಯುದ್ಧವನ್ನು ಜಗಜ್ಜಾಹೀರು ಮಾಡಿದೆ ಬೆಳಗಾವಿ ರಾಜಕಾರಣದ ಕಿಚ್ಚು. ಒಂದ್ಕಡೆ ಜಾರಕಿಹೊಳಿ ಜ್ವಾಲೆ, ಮತ್ತೊಂದ್ಕಡೆ ಹೆಬ್ಬಾಳ್ಕರ್ ಖದರ್. ಇದ್ರ ಮಧ್ಯೆ ಡಿಕೆ ಶಿವಕುಮಾರ್. ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಜಾರಕಿಹೊಳಿಗೆ ನಂಬರ್ ಗೇಮ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ ಡಿಕೆಶಿ ಆಪ್ತ ಶಾಸಕ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ.. ಈ ಬೆಳಗಾವಿ ರಾಜಕಾರಣದ ಕಿಚ್ಚು ಆರೋದೇ ಇಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲೂ ಧಗಧಗಿಸ್ತಾ ಇರೋದು ಅದೇ ಕಿಚ್ಚು. ಅವತ್ತು ಗೋಕಾಕ್ ಸಾಹುಕಾರ Vs ಲಕ್ಷ್ಮೀ ಹೆಬ್ಬಾಳ್ಕರ್, ಇವತ್ತು ಸೈಲೆಂಟ್ ಸಾಹುಕಾರ್ Vs ಹೆಬ್ಭಾಳ್ಕರ್. ಈ ಜಿದ್ದಾಜಿದ್ದಿಯೀಗ ಮತ್ತೊಂದು ಹಂತ ತಲುಪಿದ್ದು,  ಡಿಕೆಶಿ ಆಪ್ತ ಶಾಸಕ ನಂಬರ್ ಗೇಮ್'ನಲ್ಲಿ ನಾವೇನು ಕಮ್ಮಿ ಇಲ್ಲ ಅಂತ ಸವಾಲ್ ಹಾಕಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಅವತ್ತು ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣ. ಈಗ ಕಾಂಗ್ರೆಸ್ ಸರ್ಕಾರಕ್ಕೂ ಕುಂದಾನಗರಿ ರಾಜಕೀಯವೇ ಮುಳುವಾಗುತ್ತಾ..? ಆ ಸುಳಿವು ಕೊಟ್ಟ ಬಿಜೆಪಿ ನಾಯಕರು ಹೇಳಿದ್ದೇನು..? 2019ರಲ್ಲಿ ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣದಿಂದ ಸಿಡಿದ ಕಿಡಿ. ಈಗ ಕುಂದಾನಗರಿ ರಾಜಕೀಯದಲ್ಲಿ ಹೊತ್ತಿರುವ ಕಿಡಿಯೇ ಕಾಂಗ್ರೆಸ್ ಸರ್ಕಾರಕ್ಕೂ ಮುಳುವಾಗುತ್ತಾ..? ರಾಜಕೀಯ ಅನ್ನೋದೇ ರಹಸ್ಯಗಳ ಅಕ್ಷಯಪಾತ್ರ. ಅಲ್ಲಿಂದ ಬಗೆದಷ್ಟೂ ರಹಸ್ಯಗಳು ಹೊರ ಬರ್ತಾನೇ ಇರುತ್ತವೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more