ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

Published : Oct 22, 2023, 03:36 PM IST

ಬೆಳಗಾವಿ ಸಚಿವರಾದ ಸೈಲೆಂಟ್‌ ಸಾಹುಕಾರ ಸತೀಶ್‌ ಜಾರಕಿಹೊಳಿ, ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ರಾಜಕೀಯ ಫೈಟ್‌ ಶುರುವಾಗಿದೆ. 

ಬೆಳಗಾವಿ (ಅ.22): ರಾಜಕೀಯ ರಣರಂಗದಲ್ಲಿ ಭುಗಿಲೆದ್ದ ಆಂತರ್ಯುದ್ಧ.. ಕುಂದಾನಗರಿ ಮಂತ್ರಿಗಳ ಮಧ್ಯೆ ಮೌನಯುದ್ಧ..! ಸೈಲೆಂಟೇ ಅಸ್ತ್ರ ಅಂದ್ರು ಸತೀಶ್ ಜಾರಕಿಹೊಳಿ..!ಮೌನವಾಗಿದ್ದೇನೆ ಅಂದ್ರೆ ಅದು ನನ್ನ ವೀಕ್ನೆಸ್ ಅಲ್ಲ ಅಂದ್ರು ಲಕ್ಷ್ಮೀ ಹೆಬ್ಬಾಳ್ಕರ್. ಲಕ್ಷ್ಮೀ ಹೆಬ್ಭಾಳ್ಕರ್ ಗೆದ್ದಿರೋದು ಎರಡನೇ ಬಾರಿ, ನಾನು ಆರು ಬಾರಿ ಗೆದ್ದವನು ಅಂದಿದ್ದೇಕೆ ಜಾರಕಿಹೊಳಿ. ಸೈಲೆಂಟ್ ಸಾಹುಕಾರ ಜಾರಕಿಹೊಳಿಗೂ.. ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಏನಿದು ದುಷ್ಮನಿ..? ಅವತ್ತು ರಮೇಶ್, ಇವತ್ತು ಸತೀಶ್.. ಹೆಬ್ಬಾಳ್ಕರ್ ವಿರುದ್ಧವೇ ಗುಟುರು ಹಾಕೋದ್ಯಾಕೆ ಜಾರಕಿಹೊಳಿ ಬ್ರದರ್ಸ್..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕಾಂಗ್ರೆಸ್'ನ ಆಂತರ್ಯುದ್ಧವನ್ನು ಜಗಜ್ಜಾಹೀರು ಮಾಡಿದೆ ಬೆಳಗಾವಿ ರಾಜಕಾರಣದ ಕಿಚ್ಚು. ಒಂದ್ಕಡೆ ಜಾರಕಿಹೊಳಿ ಜ್ವಾಲೆ, ಮತ್ತೊಂದ್ಕಡೆ ಹೆಬ್ಬಾಳ್ಕರ್ ಖದರ್. ಇದ್ರ ಮಧ್ಯೆ ಡಿಕೆ ಶಿವಕುಮಾರ್. ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಜಾರಕಿಹೊಳಿಗೆ ನಂಬರ್ ಗೇಮ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ ಡಿಕೆಶಿ ಆಪ್ತ ಶಾಸಕ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ.. ಈ ಬೆಳಗಾವಿ ರಾಜಕಾರಣದ ಕಿಚ್ಚು ಆರೋದೇ ಇಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲೂ ಧಗಧಗಿಸ್ತಾ ಇರೋದು ಅದೇ ಕಿಚ್ಚು. ಅವತ್ತು ಗೋಕಾಕ್ ಸಾಹುಕಾರ Vs ಲಕ್ಷ್ಮೀ ಹೆಬ್ಬಾಳ್ಕರ್, ಇವತ್ತು ಸೈಲೆಂಟ್ ಸಾಹುಕಾರ್ Vs ಹೆಬ್ಭಾಳ್ಕರ್. ಈ ಜಿದ್ದಾಜಿದ್ದಿಯೀಗ ಮತ್ತೊಂದು ಹಂತ ತಲುಪಿದ್ದು,  ಡಿಕೆಶಿ ಆಪ್ತ ಶಾಸಕ ನಂಬರ್ ಗೇಮ್'ನಲ್ಲಿ ನಾವೇನು ಕಮ್ಮಿ ಇಲ್ಲ ಅಂತ ಸವಾಲ್ ಹಾಕಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಅವತ್ತು ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣ. ಈಗ ಕಾಂಗ್ರೆಸ್ ಸರ್ಕಾರಕ್ಕೂ ಕುಂದಾನಗರಿ ರಾಜಕೀಯವೇ ಮುಳುವಾಗುತ್ತಾ..? ಆ ಸುಳಿವು ಕೊಟ್ಟ ಬಿಜೆಪಿ ನಾಯಕರು ಹೇಳಿದ್ದೇನು..? 2019ರಲ್ಲಿ ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣದಿಂದ ಸಿಡಿದ ಕಿಡಿ. ಈಗ ಕುಂದಾನಗರಿ ರಾಜಕೀಯದಲ್ಲಿ ಹೊತ್ತಿರುವ ಕಿಡಿಯೇ ಕಾಂಗ್ರೆಸ್ ಸರ್ಕಾರಕ್ಕೂ ಮುಳುವಾಗುತ್ತಾ..? ರಾಜಕೀಯ ಅನ್ನೋದೇ ರಹಸ್ಯಗಳ ಅಕ್ಷಯಪಾತ್ರ. ಅಲ್ಲಿಂದ ಬಗೆದಷ್ಟೂ ರಹಸ್ಯಗಳು ಹೊರ ಬರ್ತಾನೇ ಇರುತ್ತವೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more