ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

ಸೈಲೆಂಟ್ ಸಾಹುಕಾರ, ಗಟ್ಟಿಗಿತ್ತಿ ಲಕ್ಷ್ಮಿಗೂ ರಾಜಕೀಯ ದುಷ್ಮನಿ! ಅವತ್ತು ಅಣ್ಣ, ಇವತ್ತು ತಮ್ಮ, ಅಸಲಿ ಆಟ ಶುರುವಾಯ್ತಾ?

Published : Oct 22, 2023, 03:36 PM IST

ಬೆಳಗಾವಿ ಸಚಿವರಾದ ಸೈಲೆಂಟ್‌ ಸಾಹುಕಾರ ಸತೀಶ್‌ ಜಾರಕಿಹೊಳಿ, ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ರಾಜಕೀಯ ಫೈಟ್‌ ಶುರುವಾಗಿದೆ. 

ಬೆಳಗಾವಿ (ಅ.22): ರಾಜಕೀಯ ರಣರಂಗದಲ್ಲಿ ಭುಗಿಲೆದ್ದ ಆಂತರ್ಯುದ್ಧ.. ಕುಂದಾನಗರಿ ಮಂತ್ರಿಗಳ ಮಧ್ಯೆ ಮೌನಯುದ್ಧ..! ಸೈಲೆಂಟೇ ಅಸ್ತ್ರ ಅಂದ್ರು ಸತೀಶ್ ಜಾರಕಿಹೊಳಿ..!ಮೌನವಾಗಿದ್ದೇನೆ ಅಂದ್ರೆ ಅದು ನನ್ನ ವೀಕ್ನೆಸ್ ಅಲ್ಲ ಅಂದ್ರು ಲಕ್ಷ್ಮೀ ಹೆಬ್ಬಾಳ್ಕರ್. ಲಕ್ಷ್ಮೀ ಹೆಬ್ಭಾಳ್ಕರ್ ಗೆದ್ದಿರೋದು ಎರಡನೇ ಬಾರಿ, ನಾನು ಆರು ಬಾರಿ ಗೆದ್ದವನು ಅಂದಿದ್ದೇಕೆ ಜಾರಕಿಹೊಳಿ. ಸೈಲೆಂಟ್ ಸಾಹುಕಾರ ಜಾರಕಿಹೊಳಿಗೂ.. ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಏನಿದು ದುಷ್ಮನಿ..? ಅವತ್ತು ರಮೇಶ್, ಇವತ್ತು ಸತೀಶ್.. ಹೆಬ್ಬಾಳ್ಕರ್ ವಿರುದ್ಧವೇ ಗುಟುರು ಹಾಕೋದ್ಯಾಕೆ ಜಾರಕಿಹೊಳಿ ಬ್ರದರ್ಸ್..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕಾಂಗ್ರೆಸ್'ನ ಆಂತರ್ಯುದ್ಧವನ್ನು ಜಗಜ್ಜಾಹೀರು ಮಾಡಿದೆ ಬೆಳಗಾವಿ ರಾಜಕಾರಣದ ಕಿಚ್ಚು. ಒಂದ್ಕಡೆ ಜಾರಕಿಹೊಳಿ ಜ್ವಾಲೆ, ಮತ್ತೊಂದ್ಕಡೆ ಹೆಬ್ಬಾಳ್ಕರ್ ಖದರ್. ಇದ್ರ ಮಧ್ಯೆ ಡಿಕೆ ಶಿವಕುಮಾರ್. ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಜಾರಕಿಹೊಳಿಗೆ ನಂಬರ್ ಗೇಮ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ ಡಿಕೆಶಿ ಆಪ್ತ ಶಾಸಕ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ.. ಈ ಬೆಳಗಾವಿ ರಾಜಕಾರಣದ ಕಿಚ್ಚು ಆರೋದೇ ಇಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲೂ ಧಗಧಗಿಸ್ತಾ ಇರೋದು ಅದೇ ಕಿಚ್ಚು. ಅವತ್ತು ಗೋಕಾಕ್ ಸಾಹುಕಾರ Vs ಲಕ್ಷ್ಮೀ ಹೆಬ್ಬಾಳ್ಕರ್, ಇವತ್ತು ಸೈಲೆಂಟ್ ಸಾಹುಕಾರ್ Vs ಹೆಬ್ಭಾಳ್ಕರ್. ಈ ಜಿದ್ದಾಜಿದ್ದಿಯೀಗ ಮತ್ತೊಂದು ಹಂತ ತಲುಪಿದ್ದು,  ಡಿಕೆಶಿ ಆಪ್ತ ಶಾಸಕ ನಂಬರ್ ಗೇಮ್'ನಲ್ಲಿ ನಾವೇನು ಕಮ್ಮಿ ಇಲ್ಲ ಅಂತ ಸವಾಲ್ ಹಾಕಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಕ್ರಮ: ಗುಜರಿ ಮಾರಾಟದಲ್ಲಿ ಗೋಲ್ಮಾಲ್!

ಅವತ್ತು ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣ. ಈಗ ಕಾಂಗ್ರೆಸ್ ಸರ್ಕಾರಕ್ಕೂ ಕುಂದಾನಗರಿ ರಾಜಕೀಯವೇ ಮುಳುವಾಗುತ್ತಾ..? ಆ ಸುಳಿವು ಕೊಟ್ಟ ಬಿಜೆಪಿ ನಾಯಕರು ಹೇಳಿದ್ದೇನು..? 2019ರಲ್ಲಿ ಮೈತ್ರಿ ಸರ್ಕಾರವನ್ನು ಮಕಾಡೆ ಮಲಗಿಸಿದ್ದು ಬೆಳಗಾವಿ ರಾಜಕಾರಣದಿಂದ ಸಿಡಿದ ಕಿಡಿ. ಈಗ ಕುಂದಾನಗರಿ ರಾಜಕೀಯದಲ್ಲಿ ಹೊತ್ತಿರುವ ಕಿಡಿಯೇ ಕಾಂಗ್ರೆಸ್ ಸರ್ಕಾರಕ್ಕೂ ಮುಳುವಾಗುತ್ತಾ..? ರಾಜಕೀಯ ಅನ್ನೋದೇ ರಹಸ್ಯಗಳ ಅಕ್ಷಯಪಾತ್ರ. ಅಲ್ಲಿಂದ ಬಗೆದಷ್ಟೂ ರಹಸ್ಯಗಳು ಹೊರ ಬರ್ತಾನೇ ಇರುತ್ತವೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more