News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

Published : Oct 18, 2023, 11:25 PM IST

ಕಾಂಗ್ರೆಸ್‌ ಸರ್ಕಾರದಲ್ಲಿ ಬೆಳಗಾವಿ ಬೆಂಕಿ ಮತ್ತೆ ಭುಗಿಲೆದ್ದಿದೆ.  ಡಿಸಿಎಂ ಡಿಕೆಶಿ ಬೆಳಗಾವಿ ಹಸ್ತಕ್ಷೇಪಕ್ಕೆ ಸತೀಶ್ ಸಿಡಿದೆದ್ದಿದ್ದಾರೆ. ಆಪ್ತನಿಗೆ ಮಂಡಳಿ ಸದಸ್ಯ ಸಿಗಲಿಲ್ಲ ಅಂತಾ ಜಾರಕಿಹೊಳಿ ಹೈಕಮಾಂಡ್‌ಗೆ ದೂರು ನೀಡಿದ್ದರೆ, ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಬೆಂಗಳೂರು (ಅ.18): ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬೆಳಗಾವಿ ರಾಜಕಾರಣ ಈಗ ಮತ್ತೆ ಮುನ್ನಲೆಗೆ ಬಂದಿದೆ. ಎಚ್‌ಡಿಕೆ ಮೈತ್ರಿ ಸರ್ಕಾರವನ್ನೇ ಕೆಡವಿದ್ದ ಬೆಳಗಾವಿ ಪಾಲಿಟಿಕ್ಸ್ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಸದ್ದು ಮಾಡ್ತಿದೆ.

ಅಂದು ರಮೇಶ್ ಜಾರಕಿಹೊಳಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ್ದರು ಅಂತಾ ಇದೇ ಡಿಕೆಶಿ ವಿರುದ್ಧ ಸಿಡಿದೆದ್ದು 17 ಮಂದಿಯನ್ನ ಆಪರೇಷನ್ ಮಾಡಿದ್ದರು. ಇಡೀ ದೋಸ್ತಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದ್ರೆ ಈಗ ಸ್ವತಃ ತಮ್ಮ ಸತೀಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಬೆಳಗಾವಿಯ ರಾಜಕೀಯಕ್ಕೆ ಡಿಕೆ ಎಂಟ್ರಿ ಕೊಟ್ಟಿದ್ದಕ್ಕೆ ಮುಸುಕಿನ ಗುದ್ದಾಟ ಶುರುವಾಗಿದೆ.

ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್‌ಗೆ ಭಾರಿ ಮುಜುಗರ: ಸತೀಶ್‌ ಜಾರಕಿಹೊಳಿ ದಸರಾ ಟೀಮ್‌ನಿಂದ ತಿರುಗೇಟು!

ಇನ್ನು ತನ್ನ ಆಪ್ತನಿಗೆ ಹುದ್ದೆ ಸಿಗಲಿಲ್ಲ ಅಂತಾ ತಮ್ಮ ಸತೀಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯತ್ವಕ್ಕೆ ಸತೀಶ್ ಆಪ್ತ ಪ್ರದೀಪ್‌ ನೇಮಕಕ್ಕೆ ಪಟ್ಟು ಹಿಡಿದಿದ್ರು.. ಇದಕ್ಕೆ ಸಿಎಂ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಇದಕ್ಕೆ ಡಿ.ಕೆ ಶಿವಕುಮಾರ್ ಕೊಕ್ಕೆ ಹಾಕಿದ್ದಾರಂತೆ. ಸತೀಶ್ ಆಪ್ತನ ಬದಲು ಬೆಂಗಳೂರಿನ ಡಾ.ಸಿ. ಪ್ರದೀಪ್‌ಗೆ ಸದಸ್ಯತ್ವ ಕೊಡಿಸಿದ್ದಾರೆ. ಈ ನೇಮಕವೇ ಇಬ್ಬರ ನಾಯಕರ ಮಧ್ಯೆ ಸಮರಕ್ಕೆ ಕಾರವಾಗಿದೆ. ಇತ್ತ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಹಸ್ತಕ್ಷೇಪಕ್ಕೂ ಸತೀಶ್ ಕೆಂಡಕಾರ್ತಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more