News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

Published : Oct 18, 2023, 11:25 PM IST

ಕಾಂಗ್ರೆಸ್‌ ಸರ್ಕಾರದಲ್ಲಿ ಬೆಳಗಾವಿ ಬೆಂಕಿ ಮತ್ತೆ ಭುಗಿಲೆದ್ದಿದೆ.  ಡಿಸಿಎಂ ಡಿಕೆಶಿ ಬೆಳಗಾವಿ ಹಸ್ತಕ್ಷೇಪಕ್ಕೆ ಸತೀಶ್ ಸಿಡಿದೆದ್ದಿದ್ದಾರೆ. ಆಪ್ತನಿಗೆ ಮಂಡಳಿ ಸದಸ್ಯ ಸಿಗಲಿಲ್ಲ ಅಂತಾ ಜಾರಕಿಹೊಳಿ ಹೈಕಮಾಂಡ್‌ಗೆ ದೂರು ನೀಡಿದ್ದರೆ, ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಬೆಂಗಳೂರು (ಅ.18): ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬೆಳಗಾವಿ ರಾಜಕಾರಣ ಈಗ ಮತ್ತೆ ಮುನ್ನಲೆಗೆ ಬಂದಿದೆ. ಎಚ್‌ಡಿಕೆ ಮೈತ್ರಿ ಸರ್ಕಾರವನ್ನೇ ಕೆಡವಿದ್ದ ಬೆಳಗಾವಿ ಪಾಲಿಟಿಕ್ಸ್ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಸದ್ದು ಮಾಡ್ತಿದೆ.

ಅಂದು ರಮೇಶ್ ಜಾರಕಿಹೊಳಿ ಬೆಳಗಾವಿ ಡಿಸಿಸಿ ಬ್ಯಾಂಕ್‌ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ್ದರು ಅಂತಾ ಇದೇ ಡಿಕೆಶಿ ವಿರುದ್ಧ ಸಿಡಿದೆದ್ದು 17 ಮಂದಿಯನ್ನ ಆಪರೇಷನ್ ಮಾಡಿದ್ದರು. ಇಡೀ ದೋಸ್ತಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದ್ರೆ ಈಗ ಸ್ವತಃ ತಮ್ಮ ಸತೀಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಬೆಳಗಾವಿಯ ರಾಜಕೀಯಕ್ಕೆ ಡಿಕೆ ಎಂಟ್ರಿ ಕೊಟ್ಟಿದ್ದಕ್ಕೆ ಮುಸುಕಿನ ಗುದ್ದಾಟ ಶುರುವಾಗಿದೆ.

ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್‌ಗೆ ಭಾರಿ ಮುಜುಗರ: ಸತೀಶ್‌ ಜಾರಕಿಹೊಳಿ ದಸರಾ ಟೀಮ್‌ನಿಂದ ತಿರುಗೇಟು!

ಇನ್ನು ತನ್ನ ಆಪ್ತನಿಗೆ ಹುದ್ದೆ ಸಿಗಲಿಲ್ಲ ಅಂತಾ ತಮ್ಮ ಸತೀಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯತ್ವಕ್ಕೆ ಸತೀಶ್ ಆಪ್ತ ಪ್ರದೀಪ್‌ ನೇಮಕಕ್ಕೆ ಪಟ್ಟು ಹಿಡಿದಿದ್ರು.. ಇದಕ್ಕೆ ಸಿಎಂ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಇದಕ್ಕೆ ಡಿ.ಕೆ ಶಿವಕುಮಾರ್ ಕೊಕ್ಕೆ ಹಾಕಿದ್ದಾರಂತೆ. ಸತೀಶ್ ಆಪ್ತನ ಬದಲು ಬೆಂಗಳೂರಿನ ಡಾ.ಸಿ. ಪ್ರದೀಪ್‌ಗೆ ಸದಸ್ಯತ್ವ ಕೊಡಿಸಿದ್ದಾರೆ. ಈ ನೇಮಕವೇ ಇಬ್ಬರ ನಾಯಕರ ಮಧ್ಯೆ ಸಮರಕ್ಕೆ ಕಾರವಾಗಿದೆ. ಇತ್ತ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಹಸ್ತಕ್ಷೇಪಕ್ಕೂ ಸತೀಶ್ ಕೆಂಡಕಾರ್ತಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more