ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಸಿಂಹ ಸವಾಲು!

Aug 24, 2021, 5:43 PM IST

ಮೈಸೂರು, (ಆ.24): ಬೆಂಗಳೂರು –ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಗ್ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು–ಮೈಸೂರು ದಶಪಥ ರಸ್ತೆ ಕ್ರೆಡಿಟ್: ಬಿಜೆಪಿ ನಾಯಕರಲ್ಲೇ ಕುಸ್ತಿ
 
ಬೆಂಗಳೂರು –ಮೈಸೂರು ದಶಪಥ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ಸುಮಲತಾ ಅಂಬರೀಶ್ ಆರೋಪ ಮಾಡಿದ್ದರು. ಇದಕ್ಕೆ ಇಂದು (ಆ.24) ಮೈಸೂರು ಸಂಸದ ಪ್ರತಾಪ್ ಸಿಂಹ್ ಪ್ರತಿಕ್ರಿಯಿಸಿದ್ದು,  ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎನ್ನುವುದನ್ನು ತೋರಿಸಲು ಎಂದು ಸವಾಲು ಹಾಕಿದ್ದಾರೆ.