ಬೆಂಗ್ಳೂರು ಗಲಭೆ: ಕಾಂಗ್ರೆಸ್ ಶಾಸಕ ಅಖಂಡ ಮನೆಗೆ ಬಿಜೆಪಿ ನಿಯೋಗ....!

Aug 16, 2020, 8:22 PM IST

ಬೆಂಗಳೂರು, (ಆ.16): ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.  ಕಾವಲ್ ಬೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹಾನಿ ಉಂಟುಮಾಡಿದ್ದಾರೆ. 

ಶಾಸಕ ಅಖಂಡ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರೆ ಸುದ್ದಿಗೆ ಸಿಕ್ತು ಸ್ಪಷ್ಟನೆ

ಈ ಹಿನ್ನೆಲೆಯಲ್ಲಿ  ಶಾಸಕ ಅರವಿಂದ ಲಿಂಬಾವಳಿ, ಸಂಸದರಾದ ಪಿ.ಸಿ ಮೋಹನ್, ಆನೇಕಲ್ ನಾರಾಯಣಸ್ವಾಮಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡಿದರು.