Tejasvi Surya: 3 ವರ್ಷ ಸಂಸದರಾಗಿ ತೇಜಸ್ವಿ ಸೂರ್ಯ ಮಾಡಿದ್ದೇನು? ಮುಸ್ಲಿಮರೆಂದರೆ ದ್ವೇಷ ಯಾಕೆ?

Tejasvi Surya: 3 ವರ್ಷ ಸಂಸದರಾಗಿ ತೇಜಸ್ವಿ ಸೂರ್ಯ ಮಾಡಿದ್ದೇನು? ಮುಸ್ಲಿಮರೆಂದರೆ ದ್ವೇಷ ಯಾಕೆ?

Published : Sep 22, 2022, 04:11 PM ISTUpdated : Sep 22, 2022, 04:12 PM IST

MP Tejasvi Surya News Hour Special: ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ  ತೇಜಸ್ವಿ ಸೂರ್ಯ ನೇರಾ ನೇರ ಪ್ರಶ್ನೆಗಳಿಗೆ ಮತ್ತು ವಿರೋಧಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ

ಬೆಂಗಳೂರು (ಸೆ. 22):  ರಾಜ್ಯ ಬಿಜೆಪಿ ವಕ್ತಾರರಾಗಿದ್ದ ತೇಜಸ್ವಿ ಸೂರ್ಯಗೆ (Tejasvi Surya) ಬಿಜೆಪಿ ಹೈಕಮಾಂಡ್ ಸರ್ಪ್ರೈಸ್ ಎಂಬಂತೆ ಟಿಕೆಟ್ ಘೋಷಿಸಿತ್ತು. ಅನಂತ್ ಕುಮಾರ್ ಅವರಂತ ಹಿರಿಯ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರ ಬೆಂಗಳೂರು ದಕ್ಷಿಣ (Bengaluru South). ಇಂಥಹ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದು ಕಾಂಗ್ರೆಸ್ಸಿನ ಪಳಗಿದ ರಾಜಕಾರಣಿ ಬಿಕೆ ಹರಿಪ್ರಸಾದ್ (B K Hariprasad). ಆ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಮೂರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. 

ಕನ್ನಡಿಗನಿಗೆ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸ್ಥಾನ: ಅತ್ಯಂತ ಕಡಿಮೆ ವಯಸ್ಸಿಗೆ ಸಂಸದರಾದ ಹೆಗ್ಗಳಿಕೆ ಪಡದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಹೈಕಮಾಂಡ್ ಯುವ ಮೋರ್ಚಾ (BJP Yuva Morcha) ರಾಷ್ಟ್ರೀಯ  ಅಧ್ಯಕ್ಷ ಸ್ಥಾನ ನೀಡಿತು. ಅತ್ಯಂತ ಕಡಿಮೆ ವಯಸ್ಸಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ತೇಜಸ್ವಿ ಸೂರ್ಯ. ಪಕ್ಷ ಸಂಘಟನೆಗಾಗಿ ಈಗ ತೇಜಸ್ವಿ ದೇಶಾದ್ಯಂತ ಓಡಾಡುತ್ತಿರುತ್ತಾರೆ. 

News Hour Special: ಸಾವರ್ಕರ್‌ ಹೋರಾಟಗಾರ ಅಥವಾ ಹೇಡಿ: ಯಾವುದು ಸತ್ಯ?

ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಹಲವು ಸದನ ಸಮಿತಿಗಳ ಸದಸ್ಯರಾಗಿದ್ದಾರೆ. ಬೆಂಗಳೂರು (Bengaluru) ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿದ್ದಾರೆ. ತೇಜಸ್ವಿ ಸೂರ್ಯಗೂ ವಿವಾದಗಳಿಗ ಎಲ್ಲಿಲ್ಲದ ನಂಟು. 

ಮುಸ್ಲಿಮರನ್ನು ಪಂಕ್ಚರ್ ಹಾಕುವವರು ಎಂದು ಹೇಳಿದ್ದು ದೊಡ್ಡ ವಿವಾದವಾಗಿತ್ತು. ಪಕ್ಷದ ಸಿದ್ಧಾಂತವನ್ನ ಸಮರ್ಥಿಸಿಕೊಳ್ಳಲು ಯಾರನ್ನ ಬೇಕಾದರೂ ವಿರೋಧಿಸಬಲ್ಲರು. ಜತೆಗೆ ಅಭಿವೃದ್ಧಿ ವಿಚಾರಗಳಲ್ಲೂ ತೇಜಸ್ವಿ ಸಾಕಷ್ಟು ಕೆಲಸ ಮಾಡಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ  ತೇಜಸ್ವಿ ಸೂರ್ಯ ನಮ್ಮ ಪ್ರಶ್ನೆಗಳಿಗೆ ಮತ್ತು ವಿರೋಧಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more