ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

ಕೇರಳ ಬಳಿಕ ಕರ್ನಾಟಕಕ್ಕೆ ಭಾರತ್ ಜೋಡೋ: ಕಾಂಗ್ರೆಸ್ಸಿಗೆ ಎಷ್ಟೊಂದು ಬ್ಯಾಡ್ ನ್ಯೂಸ್!

Published : Sep 14, 2022, 10:17 PM ISTUpdated : Sep 14, 2022, 10:20 PM IST

Bharat Jodo Yatra: 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌  ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿದೆ. 
 

ನವದೆಹಲಿ (ಸೆ. 14): 2024ರ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಆರಂಭಿಸಿರುವ 150 ದಿನಗಳ ಪಾದಯಾತ್ರೆ ವೇಳೆ ಮಳೆಯನ್ನೂ ಲೆಕ್ಕಿಸದೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಇತರ ನಾಯಕರು ಹೆಜ್ಜೆ ಹಾಕುತ್ತಿದ್ದಾರೆ.  ‘ಕಾಲುಗಳಲ್ಲಿ ಬೊಬ್ಬೆ ಬಂದರೂ ಪರವಾಗಿಲ್ಲ. ನಾವು ದೇಶವನ್ನು ಒಗ್ಗೂಡಿಸುವುದನ್ನು ಬಿಡುವುದಿಲ್ಲ. ನಾವು ನಿಲ್ಲುವುದಿಲ್ಲ. ದ್ವೇಷ, ಹಿಂಸೆ ಮತ್ತು ಕೋಪದ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು. ಆದರೆ ಇವು ದೇಶ ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಕಡಿಮೆ ಮಾಡುವುದಿಲ್ಲ ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. 

ಇನ್ನು  ಭಾರತ್‌ ಜೋಡೋ ಯಾತ್ರೆ (Bharat Jodo Yatra) ರಾಜ್ಯದ ಬಳ್ಳಾರಿಗೆ ಬಂದಾಗ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಯಾತ್ರೆ ಅವಧಿಯಲ್ಲಿ ಕರ್ನಾಟಕದಲ್ಲಿ ಪಕ್ಷದಿಂದ ನಡೆಯಲಿರುವ ಏಕೈಕ ಸಮಾವೇಶವಾಗಿದೆ. ಈ ನಡುವೆ ಕಾಂಗ್ರೆಸ್ಸಿಗೆ ಸಾಕಷು ಸಂಕಷ್ಟಗಳು ಎದುರಾಗಿವೆ.  ಕೇರಳ ಮುಗಿಸಿ ಸೆಪ್ಟೆಂಬರ್‌ 30ಕ್ಕೆ ಕರ್ನಾಟಕಕ್ಕೆ ಪಾದಯಾತ್ರೆ ಕಾಲಿಡುತ್ತಿದೆ.  ಆದರೆ ಸಿದ್ದರಾಮಯ್ಯ-ಡಿಕೆಶಿ ಮುನಿಸು ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಇತ್ತ ಗೋವಾದಲ್ಲಿ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಎಲ್ಲದರ ಕುರಿತ ಲೆಫ್ಟ್‌ ರೈಟ್‌ ಸೆಂಟರ್‌ ಚರ್ಚೆ ಇಲ್ಲಿದೆ 

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more