ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ, ಉಚಿತ ಗ್ಯಾರೆಂಟಿ ಜೊತೆ ಹೊಸ ಕಾರ್ಯಕ್ರಮ ಘೋಷಣೆ!

Published : Jul 07, 2023, 11:24 PM ISTUpdated : Jul 07, 2023, 11:25 PM IST

ವಿಧಾನಸಭೆಯಲ್ಲಿ ಭದ್ರತಾ ಲೋಪ, ಅಧಿವೇಶನದೊಳಗೆ ಕುಳಿತ ವ್ಯಕ್ತಿ , ಗೃಹ ಲಕ್ಷ್ಮಿ ಯೋಜನೆಗೆ ವರ್ಷಕ್ಕೆ 30,000 ಕೋಟಿ, ಆರ್ಥಿಕ ಹೊರೆ ಮಧ್ಯ ಭರಪೂರ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಉಚಿತ 5 ಗ್ಯಾರೆಂಟಿಗಳಿಗೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಅಬಕಾರಿ ಸುಂಕ, ನೋಂದಣಿ ಸುಂಕ, ಮುದ್ರಾಂಕ ಸುಂಕ ಏರಿಕೆ ಮಾಡಲಾಗಿದೆ. 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ 10 ಯೋಜನೆಗೆ ತಡೆ ನೀಡಲಾಗಿದೆ.ಸಿದ್ದರಾಮಯ್ಯ ಬಜೆಟ್‌ ಹಿಂದೂ ವಿರೋಧಿ ಬಜೆಟ ಆಗಿದೆ. ವಿವಾಹ ನೋಂದಣಿಗೆ ಆನ್‌ಲೈನ್ ಆವಕಾಶ ನೀಡುವ ಮೂಲಕ ಲವ್ ಜಿಹಾದ್‌ಗೆ ಉತ್ತೇಜನ ನೀಡಿದೆ. ಜೊತೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದೆ. ಇದು ಹಿಂದೂ ವಿರೋಧಿ ಬಜೆಟ್ ಎಂದು ಬಿಜೆಪಿ ಟೀಕಿಸಿದೆ.ಕಾಂಗ್ರೆಸ್ ಸರ್ಕಾರದ ಈ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬಜೆಟ್ ಎಂದು ಹೆಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ ಅನ್ನೋ ಯಾವುದೇ ವಿಚಾರವಿಲ್ಲ. ಪ್ರತಿ ದಿನ ಕೇಂದ್ರವನ್ನು ದೂರಿದರೆ, ಕೇಂದ್ರ ನಮ್ಮ ನೆರವಿಗೆ ಎಲ್ಲಿಗೆ ಬರುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more