News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

Published : Apr 13, 2023, 11:52 PM IST

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದಲ್ಲಿ ಬಂಡಾಯವೆದ್ದವರಿಗೆ ಜೆಡಿಎಸ್‌ ರತ್ನಗಂಬಳಿಯ ಸ್ವಾಗತ ನೀಡುತ್ತಿದೆ. ಈ ಎರಡೂ ಪಕ್ಷದಲ್ಲಿ ಟಿಕೆಟ್‌ ಸಿಗದೇ ಇದ್ದವರಿಗೆ ಜೆಡಿಎಸ್‌ನಲ್ಲಿ ಟಿಕೆಟ್‌ ಪಕ್ಕಾ ಎನ್ನುವ ಮಾತುಗಳು ಕೇಳಿಬರುತ್ತಿದೆ.
 

ಬೆಂಗಳೂರು (ಏ.13): ರಾಜ್ಯ ರಾಜಕೀಯದಲ್ಲಿ ಈಗ ಬಂಡಾಯದ ಬಿರುಗಾಳಿ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲ ಉಂಟಾಗಿರುವ ಟಿಕೆಟ್‌ ಅಸಮಾಧಾನ ಜೆಡಿಎಸ್‌ಗೆ ಬಂಡವಾಳವಾಗಿದೆ. ರಾಷ್ಟ್ರೀಯ ಪಕ್ಷಗಳಲ್ಲಿ ಬಂಡೆದ್ದವರಿಗೆ ಜೆಡಿಎಸ್ ನಾಯಕರಿಂದ ಸ್ವಾಗತ ಸಿಗುತ್ತಿದೆ.

ಕಡೂರು ಕ್ಷೇತ್ರದಲ್ಲಿ ಕೆಎಸ್‌ ಆನಂದ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ ಬೆನ್ನಲ್ಲಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೈಎಸ್‌ವಿ ದತ್ತಾ ಜೆಡಿಎಸ್‌ ಕೂಡಿಕೊಂಡಿದ್ದು, ಸ್ಪರ್ಧೆ ಮಾಡಲಿದ್ದಾರೆ. ಇನ್ನು ಚಿತ್ರದುರ್ಗದಲ್ಲಿ ಕೆಸಿ ವೀರೇಂದ್ರಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೆ, ಬಂಡಾಯಗಾರ ರಘು ಆಚಾರ್‌ ಜೆಡಿಎಸ್‌ ಸೇರಿದ್ದಾರೆ.

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಇನ್ನು ಬಿಜೆಪಿ ಪಕ್ಷಕ್ಕೆ ಬರೋದಾರೆ, ಗುರುಸಿದ್ದಪ್ಪ ದ್ಯಾಮಣ್ಣನವರ್ ಬಿಜೆಪಿ ಹಾವೇರಿಯಿಂದ ಟಿಕೆಟ್‌ ನೀಡಿದ್ದು, ನೆಹರು ಓಲೇಕಾರ್‌ ಈಗ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಜಿ.ವಿ ಬಸವರಾಜುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರ ಬೆನ್ನಲ್ಲಿಯೇ ಎನ್‌ ಆರ್‌ಸಂತೋಷ್‌ ಜೆಡಿಎಸ್‌ನತ್ತ ತೆರಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more