ಕಲ್ಯಾಣ ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ! ಕಮಲ ಪಡೆಗೆ ಕಲಬುರಗಿ ಪಾಲಿಕೆ ಚುಕ್ಕಾಣಿ

ಕಲ್ಯಾಣ ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ! ಕಮಲ ಪಡೆಗೆ ಕಲಬುರಗಿ ಪಾಲಿಕೆ ಚುಕ್ಕಾಣಿ

Published : Mar 23, 2023, 06:41 PM IST

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಏರಿದೆ. ನೂತನ ಮೇಯರ್ ಆಗಿ ವಿಶಾಲ್ ದರ್ಗಿ, ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ.

ಕಲಬುರಗಿ (ಮಾ.23) : ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಏರಿದೆ. ಪಾಲಿಕೆಯ ನೂತನ ಮೇಯರ್ ಆಗಿ ವಿಶಾಲ್ ದರ್ಗಿ ಹಾಗೂ ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ.
ಹಲವು ವರ್ಷಗಳಿಂದ ಕಲಬುರಗಿ ಪಾಲಿಕೆಯ ಚುಕ್ಕಾಣಿ ಹಿಡಿಯಬೇಕು ಎಂದು ಶ್ರಮಿಸುತ್ತಿದ್ ದಕ್ಷಿಣ ಶಾಸಕ ದತ್ತಾತ್ರೆಯ ಪಾಟೀಲ್ ರೇವೂರ ಪ್ರಯತ್ನಕ್ಕೆ ಕಡೆಗೂ ಜಯ ಸಿಕ್ಕಂತಾಗಿದೆ. ರೇವೂರ ಅವರ ಬೆಂಬಲಿಗನಿಗೆ ಈಗ  ಮೇಯರ್ ಗಾದಿ ಒಲಿದುಬಂದಿದೆ. ಈ ಹಿಂದೆ ಶಾಸಕ ಚಂದ್ರಶೇಖರ್ ಪಾಟೀಲ್ ರೇವೂರ ಪ್ರಯತ್ನಕ್ಕೆ ಫಲ ಸಿಕ್ಕಿತ್ತು. ಈಗ ಅವರ ಮಗ ದತ್ತಾತ್ರೇಯ ಪಾಟೀಲ್ ರೇವೂರ (Dattatraya Patil Revoor) ಗೆ ಈ ಶ್ರೇಯಸ್ಸು ಸಲ್ಲಲಿದೆ. ಹನ್ನೆರಡು ವರ್ಷದ ಬಳಿಕ ಅಧಿಕಾರ ಸಿಕ್ಕ ಸಂಭ್ರಮದಲ್ಲಿರುವ ಬಿಜೆಪಿ ಕಾರ್ಯಕರ್ತರು. ಇಂದು ಟೌನ್ ಹಾಲ್ ಮುಂದೆ ಕಾರ್ಯಕರ್ತರ ವಿಜಯೋತ್ಸವ ಆಚರಿಸಿದರು.

ಇಂದು ಚುನಾವಣೆಗೆ ಹಾಜರಾದ 65  ಸದಸ್ಯರಲ್ಲಿ 33 ಮತ ಬಿಜೆಪಿಗೆ ಬಂದಿವೆ. ಇನ್ನು ಜೆಡಿಎಸ್ ಬೆಂಬಲ ಸಿಕ್ಕರೂ ಕೂಡ ಕಾಂಗ್ರೆಸ್ ಕೇವಲ 32 ಮತ ಗಳಿಸಲಷ್ಟೇ ಶಕ್ತವಾಗಿದ್ದು, ಮೇಯರ್‌ ಗಾದಿಗೆ ಏರುವಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದೆ. ಈ ಮೂಲಕ ಅಖಿಲ ಭಾರತೀಯ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೂಡ ಹಿನ್ನಡೆ ಉಂಟುಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಮೇಯರ್‌ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಎಂದೆನಿಸಿಕೊಳ್ಳುತ್ತಿದೆ.

ಕಳೆದ 2010 ರಲ್ಲಿ ಅಂದಿನ ಚಂದ್ರಶೇಖರ್(Chandrashekhar revooru) ನೇತೃತ್ವದಲ್ಲಿ ಮೊದಲ ಬಾರಿಗೆ ಮೇಯರ್ ಗಾದಿ ಏರಿದ್ದ ಬಿಜೆಪಿ. ಚಹಾ ಮಾರುವ ಮಹಿಳೆ ಸುನಂದಾ ಮೊದಲ ಬಾರಿಗೆ ಕೇಸರಿ ಪಕ್ಷದಿಂದ ಅಧಿಕಾರಕ್ಕೆರಿದ್ದರು ಆಗ ಕಾಂಗ್ರೆಸ್ ಪಕ್ಷದ ಕೆಲ ಸದಸ್ಯರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಅಲ್ಲಿಂದೀಚೆಗೆ ಬಿಜೆಪಿಗೆ ಅಧಿಕಾರ ಸಿಗದಂತೆ ನೋಡಿಕೊಂಡಿದ್ದ ಕಾಂಗ್ರೆಸ್. ಇದೀಗ ಹನ್ನೆರಡು ವರ್ಷ ವನವಾಸದ ಬಳಿಕೆ ಬಿಜೆಪಿ ತೆಕ್ಕೆಗೆ ಆಡಳಿತ ಚುಕ್ಕಾಣಿ ಸಿಕ್ಕಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more