Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Published : Jan 04, 2023, 04:18 PM IST

ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ.

ಮಂಗಳೂರು (ಜ.04): ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ‌ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿ ಕಾರಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆಗೆ ನಾಚಿಕೆ ಆಗಬೇಕು. ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದೆ. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ‌ಬದುಕಿಸಲ್ಲ. ಅವರ ಇಂಜಿನ್ ಜನ ಸಾಮಾನ್ಯರ ಕಣ್ಣೀರಿನಲ್ಲಿ ಕಟ್ಟಲಾಗಿದೆ. ಇನ್ನು ಮುಂದೆ ಇವರ ಇಂಜಿನ್ ಅನ್ನು ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರು. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದಾರೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಸಿಕ್ಕಿದಾಗ ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ ಎಂದು ಹೇಳಿದರು. 

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more