Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Published : Jan 04, 2023, 04:18 PM IST

ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ.

ಮಂಗಳೂರು (ಜ.04): ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ‌ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿ ಕಾರಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆಗೆ ನಾಚಿಕೆ ಆಗಬೇಕು. ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದೆ. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ‌ಬದುಕಿಸಲ್ಲ. ಅವರ ಇಂಜಿನ್ ಜನ ಸಾಮಾನ್ಯರ ಕಣ್ಣೀರಿನಲ್ಲಿ ಕಟ್ಟಲಾಗಿದೆ. ಇನ್ನು ಮುಂದೆ ಇವರ ಇಂಜಿನ್ ಅನ್ನು ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರು. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದಾರೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಸಿಕ್ಕಿದಾಗ ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ ಎಂದು ಹೇಳಿದರು. 

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more