Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Published : Jan 04, 2023, 04:18 PM IST

ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ.

ಮಂಗಳೂರು (ಜ.04): ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ‌ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿ ಕಾರಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆಗೆ ನಾಚಿಕೆ ಆಗಬೇಕು. ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದೆ. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ‌ಬದುಕಿಸಲ್ಲ. ಅವರ ಇಂಜಿನ್ ಜನ ಸಾಮಾನ್ಯರ ಕಣ್ಣೀರಿನಲ್ಲಿ ಕಟ್ಟಲಾಗಿದೆ. ಇನ್ನು ಮುಂದೆ ಇವರ ಇಂಜಿನ್ ಅನ್ನು ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರು. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದಾರೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಸಿಕ್ಕಿದಾಗ ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ ಎಂದು ಹೇಳಿದರು. 

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more