Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Assembly election: ಬಿಜೆಪಿಗೆ ರಸ್ತೆ ಸರಿ ಮಾಡೋ ಯೋಗ್ಯತೆ ಇಲ್ಲ: ಕಟೀಲ್‌ಗೆ ಯು.ಟಿ. ಖಾದರ್ ತಿರುಗೇಟು

Published : Jan 04, 2023, 04:18 PM IST

ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ.

ಮಂಗಳೂರು (ಜ.04): ಸಂಸದ ನಳಿನ್‌ ಕುಮಾರ್‌ ಕಟೀಲ್ ಸೇರಿ ಬಿಜೆಪಿ ನಾಯಕರಿಗೆ ರಸ್ತೆ, ಗುಂಡಿ ಸರಿ ಮಾಡುವ ಅರ್ಹತೆ ಮತ್ತು ಯೋಗ್ಯತೆ ಇವರಿಗೆ ಇಲ್ಲ. ಹೀಗಾಗಿ, ಲವ್‌ ಜಿಹಾದ್ ಎಂಬ ಭಾವನಾತ್ಮಕ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಏನೆಲ್ಲಾ ‌ಮಾಡ್ತೇನೆ ಹೇಳಿದ್ರೋ ಅದು ಆಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಕುಚಲಕ್ಕಿ ತರಲು ಯೋಗ್ಯತೆ ಇಲ್ಲದ ಇವರು ಜನಪ್ರತಿನಿಧಿಗಳಾ? ಎಂದು ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿ ಕಾರಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, ಉಳ್ಳಾಲದಲ್ಲಿ ರಸ್ತೆ, ಚರಂಡಿ ವಿಷಯ ಬಿಟ್ಟು ಲವ್ ಜಿಹಾದ್ ಕಡೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಹೇಳಿಕೆಗೆ ನಾಚಿಕೆ ಆಗಬೇಕು. ಇವರಿಗೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ ಅಂತ ಜನರಿಗೆ ಹೇಳಿದ್ದಾರೆ. ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದಾರೆ. ಡಬಲ್ ಇಂಜಿನ್ ಸರ್ಕಾರದ ಫ್ಯೂಲ್ ಕಮ್ಯೂನಲ್ ಫ್ಯೂಲ್ ಆಗಿದೆ. ಅವರ ಸೈಲೆನ್ಸರ್ ಹೊಗೆ ವಿಷ, ಅದು ಯಾರನ್ನೂ ‌ಬದುಕಿಸಲ್ಲ. ಅವರ ಇಂಜಿನ್ ಜನ ಸಾಮಾನ್ಯರ ಕಣ್ಣೀರಿನಲ್ಲಿ ಕಟ್ಟಲಾಗಿದೆ. ಇನ್ನು ಮುಂದೆ ಇವರ ಇಂಜಿನ್ ಅನ್ನು ಜನ ಕಿತ್ತು ಬಿಸಾಡ್ತಾರೆ. ಇವರು ಜಾತಿ ಧರ್ಮ ಆಧಾರದಲ್ಲಿ ವಿಭಾಗ ಮಾಡುವವರು. ಬಿರುಕು ಮೂಡಿಸಲು ಇವರು ಇದನ್ನೆಲ್ಲಾ ಮಾಡ್ತಾ ಇದಾರೆ. ನಿನ್ನೆ ನಳಿನ್ ಕುಮಾರ್ ಕಟೀಲ್ ಸಿಕ್ಕಿದಾಗ ಚಾಲೆಂಜ್ ಹಾಕಿದ್ದೇನೆ. ರಮಾನಾಥ್ ರೈ ಗೆದ್ದು ಉಸ್ತುವಾರಿ ಸಚಿವರಾಗ್ತಾರೆ, ನಮ್ಮದೇ ಸರ್ಕಾರ ಬರುತ್ತೆ ಅಂತ ಹೇಳಿದ್ದೇನೆ ಎಂದು ಹೇಳಿದರು. 

ರಸ್ತೆ & ಚರಂಡಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಯೋಚಿಸಿ: ನಳಿನ್ ಕುಮಾರ್ ಕಟೀಲ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more