ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

Published : Jul 04, 2023, 09:29 AM IST

ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಇಂದಿನಿಂದ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳನ್ನು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಲಿದ್ದಾರೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಹೇಳಿದ್ದು, ಇದರಲ್ಲಿ 5 ಕೆಜಿ ಕೇಂದ್ರ ಕೊಡುತ್ತಿದೆ. ಆದ್ರೆ ಸರ್ಕಾರ ಕೊಡುವ ಹಣದಿಂದ 10 ಕೆಜಿ ಅಕ್ಕಿ ಸಿಗುವುದಿಲ್ಲ. ಹಾಗಾಗಿ ಮಾರುಕಟ್ಟೆಯಲ್ಲಿ ಅಕ್ಕಿಗೆ ಇರುವ ದರದ ಹಣವನ್ನೇ ಜನರಿಗೆ ಕೊಡಿ ಎಂದು ಈಗ ಬಿಜೆಪಿ ಪಟ್ಟು ಹಿಡಿದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಬಳಿಕ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಖರೀದಿಸಬೇಕು ಎಂದು ಬಿಜೆಪಿ ಆಗ್ರಹಿಸಲಿದೆ. ಇದರ ಜೊತೆಗೆ ವಿದ್ಯುತ್‌ ಬಿಲ್‌ ಏರಿಕೆಗೆ ಸಂಬಂಧಿಸಿದಂತೆ ಸಹ ಪ್ರತಿಭಟನೆ ನಡೆಸಲಿದೆ. 

ಇದನ್ನೂ ವೀಕ್ಷಿಸಿ:  ಹಾಡಹಗಲೇ ಯುವಕನ ಬರ್ಬರ ಹತ್ಯೆ: ಸ್ಥಳೀಯರ ಮೊಬೈಲ್‌ನಲ್ಲಿ ಭಯಾನಕ ದೃಶ್ಯ ಸೆರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more