ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

ಬಿಜೆಪಿಗರಿಗೆ ದ್ವೇಷ ಹುಟ್ಟು ಹಾಕುವುದೇ ಕೆಲಸ: ಸಿದ್ದರಾಮಯ್ಯ

Published : Oct 08, 2022, 06:55 PM IST

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು  ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶಿಸಿದ್ದು, ಇದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸುವ ಅಗತ್ಯವಿಲ್ಲ. ಟಿಪ್ಪು ಹೆಸರು ತೆಗೆದು ಬಿಟ್ಟು ಮಾಡೋ ಅಗತ್ಯ ಇರಲಿಲ್ಲ. ಒಡೆಯರ್  ಅವರಿಗೆ ಗೌರವ ಕೊಡಬೇಕು.  ಅಂತಿದ್ರೆ ಹೊಸ ರೈಲಿಗೆ ಒಡೆಯರ್‌ ಹೆಸರಿಡಬೇಕಿತ್ತು ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಬಿಜೆಪಿಯವರಿಗೆ ದ್ವೇಷ ಬಿತ್ತೋದೆ ಒಂದು ಕೆಲಸ ಎಂದು ಕಿಡಿಕಾರಿದ್ದಾರೆ. 

ಇನ್ನು ಸಚಿವ ಆರ್. ಅಶೋಕ್ ಮಾತನಾಡಿ, ಟಿಪ್ಪು ಕನ್ನಡಿಗ ಅಲ್ಲ, ಅವನ ಆದೇಶ ಎಲ್ಲವೂ ಪರ್ಶಿಯನ್ ಭಾಷೆ. ಖಡ್ಗದ ಲಿಪಿಯೂ ಪರ್ಷಿಯನ್ ಭಾಷೆಯಲ್ಲಿದೆ. ಮಾತ್ರವಲ್ಲ ಟಿಪ್ಪು ಕೊಡಗಿನ ಹಿಂದೂಗಳ ಕಗ್ಗೊಲೆ ಮಾಡಿ ಮತಾಂತರ ಮಾಡಿದ್ದಾನೆ. ಮಂಡ್ಯದಲ್ಲಿ ಬ್ರಾಹ್ಮಣರ ಹತ್ಯೆ ಮಾಡಿದ್ದಾನೆ. ಇತಿಹಾಸದಲ್ಲಿ ಇದೆಲ್ಲ ಇದೆ. ಟಿಪ್ಪು ಕೊಲೆಗಟುಕ, ಒಡೆಯರು ಸಮಾಜದ ಸುಧಾರಕರು. ನಮ್ಮ ಆಯ್ಕೆ ಒಡೆಯರು. ಈ‌ ಹೆಸರು ಇಟ್ಟಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡರು.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more