ಎಲ್ಲರಿಗೂ ಮಂತ್ರಿಗಿರಿ ಇಲ್ಲ ಎನ್ನುವ ಮಾತಿಗೆ ಪರೋಕ್ಷ ಎಚ್ಚರಿಕೆ ರವಾನಿಸಿದ ಅನರ್ಹ ಶಾಸಕ

Jan 13, 2020, 4:19 PM IST

ರಾಯಚೂರು/ಬೆಂಗಳೂರು, (ಜ.13): ಉಪಚುನಾವಣೆ ಫಲಿತಾಂಶ ಬಂದು ಒಂದು ತಿಂಗಳಾಯ್ತು. ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಎಂದು ಮಂತ್ರಿಗಿರಿ ಆಕಾಂಕ್ಷಿಗಳು ಕಾತರರಾಗಿ ಕಾಯ್ತಿದ್ದಾರೆ.  ಆದ್ರೆ, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಕೆಲವರಿಗೆ ನಿರಾಸೆಯಾಗುವ ಎಲ್ಲಾ ಸಾಧ್ಯತೆಗಳಿವೆ. 

ಬಿಗ್ ಶಾಕ್ ಕೊಟ್ಟ ಹೈಕಮಾಂಡ್: ಸಚಿವರಾಗ್ಬೇಕೆಂದು ಬಿಜೆಪಿಗೆ ಹೋದವರಿಗೆಲ್ಲ ಇಲ್ಲ ಮಂತ್ರಿಗಿರಿ?

ಬೈ ಎಲೆಕ್ಷನ್ ನಲ್ಲಿ ಗೆದ್ದ ನೂತನ ಅರ್ಹ ಶಾಸಕರಲ್ಲಿ ಕೆಲವರಿಗೆ ಮಾತ್ರ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಇದ್ರಿಂದ ನೂತನ ಶಾಸಕರು ಆತಂಕದಲ್ಲಿದ್ದಾರೆ. ಇನ್ನು ಈ ಸುದ್ದಿ ಹಬ್ಬುತ್ತಿದ್ದಂತೆಯೇ ಅನರ್ಹ ಶಾಸಕ, ತಮ್ಮ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.