ಪುತ್ರನಿಗೆ ಲೋಕಸಭೆ ಎಲೆಕ್ಷನ್‌ ಟಿಕೆಟ್‌ಗಾಗಿ ಈಶ್ವರಪ್ಪ ಲಾಬಿ: ಮಗನಿಗೆ ಮಠಾಧೀಶ್ವರ ಆಶೀರ್ವಾದವೂ ಇದೆ ಎಂದ ಮಾಜಿ ಸಚಿವ

Aug 13, 2023, 5:00 PM IST

ಲೋಕಸಭೆ ಎಲೆಕ್ಷನ್‌ನಲ್ಲಿ ಮಗನಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ಲಾಬಿ ನಡೆಸುತ್ತಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಸಂಸದ ಶಿವಕುಮಾರ್‌ ಉದಾಸಿ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಈ ಹಿನ್ನೆಲೆ ಕಾಂತೇಶ್ ಸ್ಪರ್ಧೆ ಮಾಡೋದು ಸೂಕ್ತ ಅಂತ ಹಾವೇರಿಯ ಸಿಂದಗಿ ಮಠದಲ್ಲಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಹಾಗೂ, ಹಾವೇರಿಯ ಎಲ್ಲ ಮಠಾಧೀಶರ ಆಶೀರ್ವಾದವೂ ಇದೆ ಎಂದು ಈಶ್ವರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.