ವಿಧಾನಸಭೆ ಸೋತವರಿಗೆ ಲೋಕ ಗೆಲ್ಲುವ ಆಸೆ: ನಾನು ಟಿಕೆಟ್ ಆಕಾಂಕ್ಷಿ ಎಂದ ಬಿಜೆಪಿ ಮಾಜಿ ಶಾಸಕ

ವಿಧಾನಸಭೆ ಸೋತವರಿಗೆ ಲೋಕ ಗೆಲ್ಲುವ ಆಸೆ: ನಾನು ಟಿಕೆಟ್ ಆಕಾಂಕ್ಷಿ ಎಂದ ಬಿಜೆಪಿ ಮಾಜಿ ಶಾಸಕ

Published : Oct 01, 2023, 11:27 AM IST

ವಿಧಾನಸಭೆ ಸೋತ ನಾಯಕರು ಈಗ ಲೋಕಸಮರ ಗೆಲ್ಲೋಕೆ ಸಜ್ಜಾಗ್ತಿದ್ದಾರೆ. ನಮಗೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಸಂದೇಶ ರವಾನಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿಯಿಂದ ದೊಡ್ಡನಗೌಡ ಪಾಟೀಲ ಕಸರತ್ತು ಶುರುಮಾಡಿದ್ರೆ..ಇತ್ತ ವೀಣಾ ಕಾಶಪ್ಪನವರು ನನಗೆ ಟಿಕೆಟ್ ಸಿಗುತ್ತೆ ಅಂತಾ ವಿಶ್ವಾಸದಲ್ಲಿದ್ದಾರೆ.
 

ವಿಧಾನಸಭೆಯಲ್ಲಿ ಸೋತ ನಾಯಕರು ಈಗ ಲೋಕಸಮರಕ್ಕೆ ಸಜ್ಜಾಗುತ್ತಿದ್ದಾರೆ. ಅಸೆಂಬ್ಲಿಯಲ್ಲಿ ಹೋದ ಮಾನವನ್ನ ಹೇಗಾದ್ರೂ ಮಾಡಿ ಲೋಕಸಭೆಯಲ್ಲಿ ಪಡಿಬೇಕು ಅಂತಾ ಅಖಾಡಕ್ಕೆ ಧುಮುಕಲು ಸಜ್ಜಾಗ್ತಿದ್ದಾರೆ. ಅದರಲ್ಲೂ ಬಿಜೆಪಿಯಲ್ಲಿ(BJP) ಸೋತವರೇ ಲೋಕಸಭೆ(Loksabha) ಮೇಲೆ ಕಣ್ಣಿಟ್ಟಿದ್ದಾರೆ. ನಾನು ಟಿಕೆಟ್ ಆಕಾಂಕ್ಷಿ ಅಂತಾ ದೊಡ್ಡನಗೌಡ ಪಾಟೀಲ ಸಂದೇಶ ರವಾನಿಸಿದ್ದಾರೆ. ಬಾಗಲಕೋಟೆಯ(Bagalkot) ಹನುಗುಂದ ವಿಧಾನಸಭೆ ಎಲೆಕ್ಷನ್ ವೇಳೆ ದೊಡ್ಡನಗೌಡ ಪಾಟೀಲ, ವಿಜಯನಂದ ಕಾಶಪ್ಪನವರ್ ವಿರುದ್ಧ ದೊಡ್ಡ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿಯ ದೊಡ್ಡನಗೌಡ ಪಾಟೀಲ(Doddanaagowda Patil) ಕೊನೆಕ್ಷಣದಲ್ಲಿ ಕಾಶಪ್ಪನವರ್ ವಿರುದ್ಧ ಸೋತ್ರು. ಅಷ್ಟೇ ಅಲ್ಲ ಬಾಗಲಕೋಟೆಯ 7 ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಜಯಬೇರಿ ಕೂಡ ದಾಖಲಿಸಿತ್ತು. ಆದ್ರೆ ವಿಧಾನಸಭೆಯಲ್ಲಿ ನನ್ನ ಕೊನೇ ಎಲೆಕ್ಷನ್ ಎಂದ ಪಾಟೀಲ ಈಗ ಲೋಕಸಭೆಗೆ ಬಿಜೆಪಿಯಿಂದ ನಾನು ಕೂಡ ಪ್ರಬಲ ಆಕಾಂಕ್ಷಿ ಎಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಟಿಕೆಟ್‌ಗಾಗಿ ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.ಇದನ್ನೇ ಅಸ್ತ್ರವಾಗಿಸಿಕೊಂಡು ದೊಡ್ಡನಗೌಡ ಪಾಟೀಲ ರಣತಂತ್ರ ಹೆಣೆಯುತ್ತಿದ್ದಾರೆ. ಆದ್ರೆ ವೀಣಾ ಕಾಶಪ್ಪನವರ್ ಮಾತ್ರ ಯಾರೇ ನಿಂತ್ರೂ ಕಾಂಗ್ರೆಸ್‌ನದ್ದೇ ಗೆಲುವು ಅನ್ನೋದರ ಜೊತೆಗೆ ನನಗೆ ಟಿಕೆಟ್ ಸಿಗುತ್ತೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಪವನ್ ಕಲ್ಯಾಣ್, ಜೂ.ಎನ್‌ಟಿಆರ್ ಜೊತೆಯಾದ್ರಾ? ತಾತನ ಪಕ್ಷಕ್ಕೆ ಸಾರಥಿ ಆಗ್ತಾರಾ ಮೊಮ್ಮಗ?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more