Hijab Row ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಸ್ಫೋಟಕ ಹೇಳಿಕೆ ಕೊಟ್ಟ ಡಿಕೆಶಿ

Feb 9, 2022, 4:34 PM IST

ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ.  ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಹಿಜಾಬ್ ವಿವಾದ, ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಶಾಸಕ ರೇಣುಕಾಚಾರ್ಯ

ಮಂತ್ರಿ ಮಗನೇ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚಿಸಿದ್ದಾರೆ. ಕೇಸರಿ ಶಾಲು ಸರಬರಾಜು ಮಾಡಿದ್ದವರು ಯಾರು? ಐವತ್ತು ಲಕ್ಷ ಶಾಲು ಸೂರತ್‌ನಲ್ಲಿ ಆರ್ಡರ್ ಮಾಡಿದ್ದಾರೆ ಎಂದು ಡಿಕೆ ಗಂಭೀರ ಆರೋಪ ಮಾಡಿದ್ದಾರೆ.