ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

Published : Apr 22, 2022, 08:29 PM IST

ಬಿಜೆಪಿ ಶಾಸಕ ಸಿಟಿ ರವಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ತಾವು ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಕೇಸರಿ ಕಂಡರೆ, ಕೇಸರಿ ಟೋಪಿ ಕಂಡರೆ ದ್ವೇಷ ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.22): ಮಾಜಿ ಸಿಎಂ ಸಿದ್ಧರಾಮಯ್ಯ (siddaramaiah) ವಿರುದ್ಧ ಸಿಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ತಾನೂ ಕೂಡ ಹಿಂದು ಎಂದು ಹೇಳ್ತಾರೆ. ಆದರೆ, ಸಿದ್ಧರಾಮಯ್ಯಗೆ ಕೇಸರ ಟೋಪಿ (saffron cap) ಮಾತ್ರ ಬೇಡ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಕುಂಕುಮ ಇಟ್ಟವರನ್ನು ಕಂಡರೆ ಹೆದರಿಗೆ ಆಗುತ್ತದೆ. ನಮ್ಮ ತಾಯಂದಿರು ಕುಂಕುಮ ಇಟ್ಟುಕೊಳ್ಳುತ್ತಾರೆ. ಕುಂಕುಮ ಇಟ್ಟುಕೊಂಡವರು ಯಾರಾದರೂ ಬಾಂಬ್ ಹಾಕಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಕೇಸರಿ ಟೋಪಿ ಹಾಕೋಕೆ ಬಂದ್ರೆ ಕಿತ್ತು ಹಾಕಿದ್ರು, ಕೇಸರಿ ಪೇಟ ತೊಟ್ಟವರು ಯಾರೂ ಬಾಂಬ್ ಹಾಕಿಲ್ಲ. ಕೇಸರಿ ಶಾಲು ಹಾಕಿಕೊಂಡವರು ಭಾರತ್ ಮಾತಾ ಕಿ ಜೈ ಎಂದು ಹೇಳುತ್ತಾರೆ ಎಂದರು.

ಉಳ್ಳಾಲ 'ಹಿಂದೂ ಶಾಸಕ' ಅಭಿಯಾನ: ಫೀಲ್ಡಿಗಿಳಿದ VHPಗೆ ಖಾದರ್ ತಿರುಗೇಟು!

ತಪ್ಪು ಮಾಡಿದವರನ್ನು ತಲೆ ಮೇಲೆ ಕೂರಿಸಿಕೊಳ್ಳುವ ಜನ ನಾವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು, ಶಿಕ್ಷೆ ಆಗಲೇ ಬೇಕು. ತಪ್ಪು ಮಾಡಿದರು ವೋಟಿನಾಸೆಗೆ ಓಲೈಸೋ ಕಾಲವಿಲ್ಲ. ಶ್ರೀರಾಮ ನವಮಿಯಂದು ಯಾಕೆ ಕಲ್ಲು ಎಸೆಯುತ್ತಾರೆ. ನಾವು ಏನಾದ್ರು ಅವರ ಮೆರವಣಿಗೆ ವೇಳೆ ಕಲ್ಲು ಹಾಕ್ತೀವಾ? ಎಂದು ಪ್ರಶ್ನೆ ಮಾಡಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more