ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

ನಾನು ಹಿಂದೂ ಅಂತಾ ಹೇಳ್ತಾರೆ, ಆದ್ರೆ ಕೇಸರಿ ಟೋಪಿ ಮಾತ್ರ ಬೇಡ ಅಂತಾರೆ!

Published : Apr 22, 2022, 08:29 PM IST

ಬಿಜೆಪಿ ಶಾಸಕ ಸಿಟಿ ರವಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ತಾವು ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಕೇಸರಿ ಕಂಡರೆ, ಕೇಸರಿ ಟೋಪಿ ಕಂಡರೆ ದ್ವೇಷ ಸಾಧಿಸುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.22): ಮಾಜಿ ಸಿಎಂ ಸಿದ್ಧರಾಮಯ್ಯ (siddaramaiah) ವಿರುದ್ಧ ಸಿಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ತಾನೂ ಕೂಡ ಹಿಂದು ಎಂದು ಹೇಳ್ತಾರೆ. ಆದರೆ, ಸಿದ್ಧರಾಮಯ್ಯಗೆ ಕೇಸರ ಟೋಪಿ (saffron cap) ಮಾತ್ರ ಬೇಡ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಕುಂಕುಮ ಇಟ್ಟವರನ್ನು ಕಂಡರೆ ಹೆದರಿಗೆ ಆಗುತ್ತದೆ. ನಮ್ಮ ತಾಯಂದಿರು ಕುಂಕುಮ ಇಟ್ಟುಕೊಳ್ಳುತ್ತಾರೆ. ಕುಂಕುಮ ಇಟ್ಟುಕೊಂಡವರು ಯಾರಾದರೂ ಬಾಂಬ್ ಹಾಕಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಕೇಸರಿ ಟೋಪಿ ಹಾಕೋಕೆ ಬಂದ್ರೆ ಕಿತ್ತು ಹಾಕಿದ್ರು, ಕೇಸರಿ ಪೇಟ ತೊಟ್ಟವರು ಯಾರೂ ಬಾಂಬ್ ಹಾಕಿಲ್ಲ. ಕೇಸರಿ ಶಾಲು ಹಾಕಿಕೊಂಡವರು ಭಾರತ್ ಮಾತಾ ಕಿ ಜೈ ಎಂದು ಹೇಳುತ್ತಾರೆ ಎಂದರು.

ಉಳ್ಳಾಲ 'ಹಿಂದೂ ಶಾಸಕ' ಅಭಿಯಾನ: ಫೀಲ್ಡಿಗಿಳಿದ VHPಗೆ ಖಾದರ್ ತಿರುಗೇಟು!

ತಪ್ಪು ಮಾಡಿದವರನ್ನು ತಲೆ ಮೇಲೆ ಕೂರಿಸಿಕೊಳ್ಳುವ ಜನ ನಾವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ತಪ್ಪು ಮಾಡಿದವರು ನೀರು ಕುಡಿಯಲೇ ಬೇಕು, ಶಿಕ್ಷೆ ಆಗಲೇ ಬೇಕು. ತಪ್ಪು ಮಾಡಿದರು ವೋಟಿನಾಸೆಗೆ ಓಲೈಸೋ ಕಾಲವಿಲ್ಲ. ಶ್ರೀರಾಮ ನವಮಿಯಂದು ಯಾಕೆ ಕಲ್ಲು ಎಸೆಯುತ್ತಾರೆ. ನಾವು ಏನಾದ್ರು ಅವರ ಮೆರವಣಿಗೆ ವೇಳೆ ಕಲ್ಲು ಹಾಕ್ತೀವಾ? ಎಂದು ಪ್ರಶ್ನೆ ಮಾಡಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more