ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದ ಶಾಸಕ ಸತೀಶ್ ರೆಡ್ಡಿಗೆ ಮಹತ್ವದ ಹುದ್ದೆ

Sep 13, 2021, 7:33 PM IST

ಬೆಂಗಳೂರು, (ಸೆ.13): ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವಿಗಾಗಿ ಶ್ರಮಿಸಿದ್ದ ಬೆಂಗಳೂರಿನ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿಗೆ ಸಿಹಿ ಸುದ್ದಿ ಸಿಕ್ಕಿದೆ.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ಹೌದು..ಎಂ. ಸತೀಶ್  ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದ ಸತೀಶ್ ರೆಡ್ಡಿ ಅವರಿಗೆ ಈಗ ಬೊಮ್ಮಾಯಿ ಅವರು ಮುಖ್ಯ ಸಚೇತಕ ಹುದ್ದೆ ನೀಡುವ ಮೂಲಕ‌ ಅಸಮಾಧಾನವನ್ನ ಶಮನ ಮಾಡಿದ್ದಾರೆ.