9 ರಾಜ್ಯಗಳ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ, ಪ್ರಧಾನಿ ಭರ್ಜರಿ ರೋಡ್‌ ಶೋ!

9 ರಾಜ್ಯಗಳ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ, ಪ್ರಧಾನಿ ಭರ್ಜರಿ ರೋಡ್‌ ಶೋ!

Published : Jan 16, 2023, 06:19 PM IST

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ದೆಹಲಿಯಲ್ಲಿ ಆರಂಭವಾಗಿದೆ. ಮುಂಬರುವ 9 ರಾಜ್ಯಗಳ ವಿಧಾನಸಭೆ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರವನ್ನು ಇಲ್ಲಿ ಚರ್ಚೆ ಮಾಡಲಾಗುತ್ತದೆ. ಕಾರ್ಯಕಾರಿಣಿಗೆ ಆಗಮಿಸುವ ವೇಳೆ ಪ್ರಧಾನಿ ಮೋದಿ 15 ನಿಮಿಷಗಳ ಕಾಲ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ.


ನವದೆಹಲಿ (ಜ.16): 2023ರಲ್ಲಿ 9 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದ್ದು, ಇಂದಿನಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಇದು ಮಂಗಳವಾರದವರೆಗೆ ಅಂದರೆ ಜನವರಿ 17ರವರೆಗೆ ಈ ಸಭೆನಡೆಯಲಿದೆ. ಸಭೆ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದ್ ಮಾರ್ಗ್‌ನಿಂದ ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ವರೆಗೆ ಸುಮಾರು 15 ನಿಮಿಷಗಳ ಕಾಲ ರೋಡ್‌ಶೋ ನಡೆಸಿದರು. ಇದಾದ ಬಳಿಕ ಕಾರ್ಯಕಾರಿಣಿ ಸಭೆಗೆ ಆಗಮಿಸಿದರು.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಾಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ನಡ್ಡಾ ಅವರು ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರಧಾನಿ ಮೋದಿಯಿಂದ ಮೆಗಾ ರೋಡ್‌ಶೋ: ದೆಹಲಿಯಲ್ಲಿ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅವರು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಪಿ ನಡ್ಡಾ ಅವರು'2023 ನಮಗೆ ಬಹಳ ಮುಖ್ಯ. ಈ ವರ್ಷ 9 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಾಗೂ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗೆಲ್ಲಲೇಬೇಕು' ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. ಈ ನಡುವೆ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ಮುಂದುವರಿಯುವ ಸಾಧ್ಯತೆಯೂ ಗೋಚರವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more