Mar 22, 2023, 5:40 PM IST
ಬೆಂಗಳೂರು (ಮಾ.22): ರಾಜ್ಯದ ವಿಧಾನಸಭಾ ಚುನಾವಣೆ 2023ರಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಸಿದ್ಧವಾಗಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗ ಬೆಂಗಳೂರಿನ ಶಿವಾಜಿನಗರದಲ್ಲಿ ಮುಸ್ಲಿಂ ನಾಯಕರ ಮಗನನ್ನೇ ಕಣಕ್ಕಿಳಿಸಲು ಮುಂದಾಗಿದೆ.
ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಮುಸ್ಲಿಂ ಬಾಹುಳ್ಯವಿರುವ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳೇ ಗೆಲ್ಲುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮುಸ್ಲಿಂ ವಿರೋಧಿ ಪಕ್ಷವೆಂತಲೇ ಕರೆಸಿಕೊಳ್ಳುತ್ತಿರುವ ಬಿಜೆಪಿ ಈಗ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದೆ. ಇನ್ನು ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಅವರು ದೆಹಲಿಯಲ್ಲಿ ನಡೆದಿ ಬಿಜೆಪಿ ಅಲ್ಪ ಸಂಖ್ಯಾತರ ಸಭೆಯಲ್ಲಿ ಭಾಗವಹಿಸಿದ್ದರು. ಈ ಬೆನ್ನಲ್ಲೇ ರೋಷನ್ ಬೇಗ್ ಅವರ ಪುತ್ರ ರುಮಾನ್ ಬೇಗ್ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಿದೆ.