ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

Published : Feb 23, 2024, 11:55 AM IST

ಅಶ್ವಿನಿ ಪುನೀತ್ ನಿರಾಕರಣೆ ನಂತರ ನಾರಾಯಣ ಬಾಂಢಗೆಗೆ ಟಿಕೆಟ್
ಮರಾಠ ಅಭ್ಯರ್ಥಿಗಾಗಿ ಹುಡುಕಾಟ.. ಸಮರ್ಥ ಅಭ್ಯರ್ಥಿ ಸಿಗಲಿಲ್ಲ
ಪಾಟೇಗಾರ ಸಮುದಾಯದ ನಾರಾಯಣ ಬಾಂಢಗೆಗೆ ಟಿಕೆಟ್ ಫೈನಲ್

ಲೋಕಸಭೆ ಹೊಸ್ತಿಲಲ್ಲಿ ರಣತಂತ್ರ ಹೂಡಿರುವ ಕಮಲಪಡೆ. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ರಾಜ್ಯಸಭೆ(Rajya Sabha) ಆಫರ್ ನೀಡಿತ್ತು. ಆದರೆ ಬಿಜೆಪಿ(BJP) ಆಫರ್ ತಿರಸ್ಕರಿಸಿರುವ ಅಶ್ವಿನಿ ಪುನೀತ್(Ashwini Puneeth), ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದಿದ್ದಾರೆ. ಅಶ್ವಿನಿ ನಿರಾಕರಣೆ ಬಳಿಕ ನಾರಾಯಣ ಬಾಂಢಗೆಗೆ ಟಿಕೆಟ್ ದೊರೆತಿದೆ. ಕರ್ನಾಟಕದಿಂದ(Karnataka) ಒಬಿಸಿ ವರ್ಗಕ್ಕೆ ರಾಜ್ಯಸಭಾ ಸ್ಥಾನ ಎಂದು ಹೈಕಮಾಂಡ್ ಹೇಳಿತ್ತಂತೆ. ಅಭ್ಯರ್ಥಿಯ ಹೆಸರು ಶಿಫಾರಸು ಮಾಡುವಂತೆ  ಹೈಕಮಾಂಡ್ ಸೂಚಿಸಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರನ್ನು ರಾಜ್ಯ ಬಿಜೆಪಿ ಪ್ರಸ್ತಾಪಿಸಿತ್ತು. ಲೋಕಸಭಾ ಚುನಾವಣೆ(Loksabha) ದೃಷ್ಟಿಯಲ್ಲಿಟ್ಟುಕೊಂಡು ಅಶ್ವಿನಿ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಳ್ಳೆಯ ಆಯ್ಕೆ ಎಂದು ಹೈಕಮಾಂಡ್ ಹೇಳಿತ್ತಂತೆ. ಅಶ್ವಿನಿ ಅವರು ಒಪ್ಪುತ್ತಾರಾ ಎಂಬುದನ್ನ ತಿಳಿಯಿರಿ ಎಂದಿದ್ದ ಹೈಕಮಾಂಡ್. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಸಂಪರ್ಕಿಸಿದ್ದ ರಾಜ್ಯ ನಾಯಕರು. ಬಿಜೆಪಿ ನಾಯಕರ ಪ್ರಸ್ತಾಪವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more