ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

ಅಶ್ವಿನಿ ಪುನೀತ್‌ಗೆ ರಾಜ್ಯಸಭೆ ಟಿಕೆಟ್ ನೀಡಲು ಮುಂದಾಗಿತ್ತಾ ಬಿಜೆಪಿ ? ನಾಯಕರ ಪ್ರಸ್ತಾಪ ತಿರಸ್ಕರಿಸಿದ್ರಾ ದೊಡ್ಮನೆ ಸೊಸೆ ?

Published : Feb 23, 2024, 11:55 AM IST

ಅಶ್ವಿನಿ ಪುನೀತ್ ನಿರಾಕರಣೆ ನಂತರ ನಾರಾಯಣ ಬಾಂಢಗೆಗೆ ಟಿಕೆಟ್
ಮರಾಠ ಅಭ್ಯರ್ಥಿಗಾಗಿ ಹುಡುಕಾಟ.. ಸಮರ್ಥ ಅಭ್ಯರ್ಥಿ ಸಿಗಲಿಲ್ಲ
ಪಾಟೇಗಾರ ಸಮುದಾಯದ ನಾರಾಯಣ ಬಾಂಢಗೆಗೆ ಟಿಕೆಟ್ ಫೈನಲ್

ಲೋಕಸಭೆ ಹೊಸ್ತಿಲಲ್ಲಿ ರಣತಂತ್ರ ಹೂಡಿರುವ ಕಮಲಪಡೆ. ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ರಾಜ್ಯಸಭೆ(Rajya Sabha) ಆಫರ್ ನೀಡಿತ್ತು. ಆದರೆ ಬಿಜೆಪಿ(BJP) ಆಫರ್ ತಿರಸ್ಕರಿಸಿರುವ ಅಶ್ವಿನಿ ಪುನೀತ್(Ashwini Puneeth), ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದಿದ್ದಾರೆ. ಅಶ್ವಿನಿ ನಿರಾಕರಣೆ ಬಳಿಕ ನಾರಾಯಣ ಬಾಂಢಗೆಗೆ ಟಿಕೆಟ್ ದೊರೆತಿದೆ. ಕರ್ನಾಟಕದಿಂದ(Karnataka) ಒಬಿಸಿ ವರ್ಗಕ್ಕೆ ರಾಜ್ಯಸಭಾ ಸ್ಥಾನ ಎಂದು ಹೈಕಮಾಂಡ್ ಹೇಳಿತ್ತಂತೆ. ಅಭ್ಯರ್ಥಿಯ ಹೆಸರು ಶಿಫಾರಸು ಮಾಡುವಂತೆ  ಹೈಕಮಾಂಡ್ ಸೂಚಿಸಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರನ್ನು ರಾಜ್ಯ ಬಿಜೆಪಿ ಪ್ರಸ್ತಾಪಿಸಿತ್ತು. ಲೋಕಸಭಾ ಚುನಾವಣೆ(Loksabha) ದೃಷ್ಟಿಯಲ್ಲಿಟ್ಟುಕೊಂಡು ಅಶ್ವಿನಿ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಒಳ್ಳೆಯ ಆಯ್ಕೆ ಎಂದು ಹೈಕಮಾಂಡ್ ಹೇಳಿತ್ತಂತೆ. ಅಶ್ವಿನಿ ಅವರು ಒಪ್ಪುತ್ತಾರಾ ಎಂಬುದನ್ನ ತಿಳಿಯಿರಿ ಎಂದಿದ್ದ ಹೈಕಮಾಂಡ್. ಹೈಕಮಾಂಡ್ ಸೂಚನೆ ನಂತರ ಅಶ್ವಿನಿ ಸಂಪರ್ಕಿಸಿದ್ದ ರಾಜ್ಯ ನಾಯಕರು. ಬಿಜೆಪಿ ನಾಯಕರ ಪ್ರಸ್ತಾಪವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಕೀಯದಿಂದ ನಮ್ಮ ಕುಟುಂಬ ದೂರ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more