2024ರಲ್ಲಿ ಗೆಲ್ಲೋರ್ ಯಾರು..? ಬೀಳೋರ್ ಯಾರು..? ಖಡಕ್ ಚಾಲೆಂಜ್ ಬೆನ್ನತ್ತಿ ಹೊರಟಿದ್ದಾರೆ ತ್ರಿಮೂರ್ತಿಗಳು..!

2024ರಲ್ಲಿ ಗೆಲ್ಲೋರ್ ಯಾರು..? ಬೀಳೋರ್ ಯಾರು..? ಖಡಕ್ ಚಾಲೆಂಜ್ ಬೆನ್ನತ್ತಿ ಹೊರಟಿದ್ದಾರೆ ತ್ರಿಮೂರ್ತಿಗಳು..!

Published : Jan 02, 2024, 12:47 PM IST

ರಣರಂಗಕ್ಕೆ ಒಂದಾಗಿ  ನುಗ್ಗಲಿದ್ದಾರೆ ದಳಪತಿ-ವಿಜಯೇಂದ್ರ..!
ಕಮಲದಳ ಜಂಟಿ ವ್ಯೂಹಕ್ಕೆ ಎದುರಾಗಿ ನಿಲ್ಲಲಿದ್ದಾರೆ ಬಂಡೆ..!
2024ರಲ್ಲಿ ರಣ ಭಯಂಕರ ಕಾಳಗಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ..!
 


2023ಕ್ಕೆ ಗುಡ್ ಬೈ ಹೇಳಿದ್ದಾಯ್ತು, 2024ಕ್ಕೆ ಕಾಲಿಟ್ಟದ್ದೂ ಆಯ್ತು. ಇದು ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೂವರು ಅಧ್ಯಕ್ಷರ ಪಾಲಿಗೆ ಚಾಲೆಂಜಜ್‌ಗಳ ವರ್ಷ. ಒಬ್ಬೊಬ್ಬರಿಗೆ ಒಂದೊಂದು ಚಾಲೆಂಜ್, ಗುರಿ ಮಾತ್ರ ಒಂದೇ. ಇಂಟ್ರೆಸ್ಟಿಂಗ್ ಸಂಗತಿ ಏನಂದ್ರೆ 2024ರ ಚಾಲೆಂಜ್ ಗೆದ್ರೆ ಮಾತ್ರ ತ್ರಿಮೂರ್ತಿಗಳ ನಾಯಕತ್ವ ಗಟ್ಟಿ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D. K. Shivakumar), ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ(B. Y. Vijayendra
) ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ(HD Kumaraswamy). ಕಾಂಗ್ರೆಸ್‌ಗೆ(Congress) ಗೆದ್ದ ನೆಲದಲ್ಲೇ ಮತ್ತೆ ಗೆದ್ದು ಬೀಗೋ ಹಠ. ಬಿಜೆಪಿಗೆ ಸೋತ ನೆಲದಲ್ಲೇ ಗೆಲುವಿನ ಗೋಪುರ ಕಟ್ಟೋ ಛಲ. ಜೆಡಿಎಸ್'ಗೆ ಅಸ್ತಿತ್ವ ಉಳಿಸಿಕೊಳ್ಳಬೇಕಾದ ಸವಾಲು. ಈ ಸವಾಲುಗಳನ್ನು ಎದುರಿಸಿ ನಿಂತಿರೋದು ಮೂರು ಪಕ್ಷಗಳ ಮೂವರು ಅಧ್ಯಕ್ಷರು. ಮೂವರ ಮುಂದೆಯೂ 2024ರಲ್ಲಿ ಸಾಲು ಸಾಲು ಸವಾಲುಗಳಿದ್ದಾವೆ. ಮೊದ್ಲಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ. ಒಂದು ತಿಂಗಳ ಹಿಂದಷ್ಟೇ ರಾಜ್ಯ ಬಿಜೆಪಿಯ(BJP) ಸಾರಥ್ಯ ವಹಿಸಿಕೊಂಡಿರೋ ವಿಜಯೇಂದ್ರ ಅವ್ರಿಗೆ 2024ನೇ ವರ್ಷ ತುಂಬಾನೇ ಇಂಪಾರ್ಟೆಂಟ್. ವಿಜಯೇಂದ್ರ ಅವ್ರ ರಾಜಕೀಯ ಭವಿಷ್ಯವನ್ನು ನಿರ್ಧರಿಸೋದೇ 2024. ಅಷ್ಟಕ್ಕೂ 2024 ವಿಜಯೇಂದ್ರ ಅವ್ರಿಗೆ ಯಾಕೆ ಇಂಪಾರ್ಟೆಂಟ್. ಈ ವರ್ಷ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಎದುರಾಗಲಿರೋದು ಅವ್ರ ರಾಜಕೀಯ ಜೀವನದಲ್ಲೇ ಅತೀ ದೊಡ್ಡ ಚಾಲೆಂಜ್. ಕಳೆದ ವರ್ಷ ಶಿಕಾರಿವೀರನ ಮಗ ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದಾರೆ, ಮೊದಲ ಬಾರಿ ಶಾಸಕರಾದ ಆರೇ ತಿಂಗಳಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ವಿಜಯೇಂದ್ರ ಅವ್ರನ್ನು ಹುಡ್ಕೊಂಡ್ ಬಂದಿದೆ. ಅಷ್ಟರ ಮಟ್ಟಿಗೆ 2023ರ ವಿಜಯೇಂದ್ರ ಪಾಲಿಗೆ ಅದೃಷ್ಟದ ವರ್ಷ ಅನ್ಬಹ್ದು. ಆದ್ರೆ ಅಸಲಿ ಚಾಲೆಂಜ್ ಶುರುವಾಗೋದು ಈ ವರ್ಷ. ವಿಜಯೇಂದ್ರ ಅವ್ರಿಗಾಗಿ ಕಾದು ಕೂತಿರೋ 2024ರ ಚಾಲೆಂಜ್'ನ ಅಸಲಿ ಮುಖದ ಅನಾವರಣ ಮಾಡ್ತೀವಿ ನೋಡಿ.

ಇದನ್ನೂ ವೀಕ್ಷಿಸಿ:  Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more