Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

Published : Dec 24, 2022, 05:31 PM IST

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಮಂಡ್ಯ (ಡಿ.24): ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಡಿ.30ಕ್ಕೆ ಅಮಿತ್‌ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಹಾಲು ಉತ್ಪಾದಕರ ಕಟ್ಟಡವನ್ನು ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಆದರೆ, ಈ ವೇಳೆ ಅಮಿತ್‌ ಶಾ ಆಗಮನದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಆದರೆ, ಇಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನವನ್ನು ಕೂಡ ಮಾಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಿ ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲು ಬಿಜೆಪಿ ಮುಂದಡಿಯಿಡುತ್ತಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!