ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

Published : Mar 08, 2023, 02:22 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ನೀಡಿರುವ ಹೇಳಿಕೆ ಬಿಜೆಪಿ ಶಾಸಕರಲ್ಲಿ ಭಾರಿ ಕಂಪನ ಸೃಷ್ಟಿಸಿದೆ.

ಕಲಬುರಗಿ (ಮಾ.08):  ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ವಿಜಯೇಂದ್ರ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದನ್ನು ಪಕ್ಷದ ಹೈಕಮಾಡ್‌ ತೀರ್ಮಾನಿಸಲಿದೆ. ಬಹುಶ: ಈಗಿನ ಮಟ್ಟಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಅಧಿಕ ಎಂದು ಹೇಳಿದರು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?