ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

Published : Aug 23, 2022, 01:38 PM IST

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿರುವ ಹಿನ್ನೆಲೆ, ಕೇಸರಿಪಡೆಯು ಕರಾವಳಿಯಿಂದಲೇ ರಣಕಹಳೆ ಮೊಳಗಿಸಲು ಪ್ಲಾನ್ ಮಾಡಿದೆ. ಇತ್ತೀಚಿಗಿನ ಬೆಳವಣಿಗೆಗಳಿಂದ ಗರಂ ಆಗಿರುವ ಕಾರ್ಯಕರ್ತರಿಗೆ ಮೋದಿ ಕೊಡಲಿದ್ದಾರೆ 'ಬೂಸ್ಟರ್‌' ಡೋಸ್!

ಬೆಂಗಳೂರು (ಆ.23): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳಿವೆ. ಇದರ ನಡುವೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ. ಕರಾವಳಿ ಕರ್ನಾಟಕದಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆಯಿಂದ ಸಿಟ್ಟಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಲು ರಾಜ್ಯ ಬಿಜೆಪಿ ಸಜ್ಜಾಗಿದೆ.

ವಿಧಾನಸಭೆ ಚುನಾವಣೆಗೆ ತಾವು ಸಿದ್ಧ ಎನ್ನುವ ಸಂದೇಶವನ್ನು ಬಿಜೆಪಿ ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸೆ. 2 ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್‌ ಸಮಾವೇಶವನ್ನು ನಡೆಸಲು ಮುಂದಾಗಿದೆ. ಚುನಾವಣೆಗೆ ರಣಕಹಳೆಯನ್ನು ಕರಾವಳಿಯಿಂದಲೇ ಮೊಳಗಿಸಲು ಬಿಜೆಪಿ ಸಿದ್ಧತೆ ಮಾಡುವುದರೊಂದಿಗೆ ಇತ್ತೀಚಿನ ಕೆಲವು ಘಟನೆಗಳ ಬಳಿಕ ಬಳಿಕ ಸಿಟ್ಟಾಗಿರುವ ತನ್ನ ಕಾರ್ಯಕರ್ತರ ಸಮಾಧಾನ ಮಾಡಲು ಈ ಸಮಾವೇಶವನ್ನು ಬಳಸಿಕೊಳ್ಳಲಿದೆ.

ಮೊಟ್ಟೆಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರು ಪ್ರಾಧಿಕಾರದ ಕೆಲ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿ ಸೆ.2 ರಂದು ಮಂಗಳೂರಿಗೆ ಬರಲಿದ್ದಾರೆ. ಪ್ರಧಾನಿ ಭೇಟಿಯನ್ನು ಬೂಸ್ಟರ್‌ ಡೋಸ್‌ ಆಗಿ ಬಳಸಿಕೊಳ್ಳುವ ಇರಾದೆಯಲ್ಲಿ ಬಿಜೆಪಿ ಇದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more