ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

Published : Aug 23, 2022, 01:38 PM IST

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿರುವ ಹಿನ್ನೆಲೆ, ಕೇಸರಿಪಡೆಯು ಕರಾವಳಿಯಿಂದಲೇ ರಣಕಹಳೆ ಮೊಳಗಿಸಲು ಪ್ಲಾನ್ ಮಾಡಿದೆ. ಇತ್ತೀಚಿಗಿನ ಬೆಳವಣಿಗೆಗಳಿಂದ ಗರಂ ಆಗಿರುವ ಕಾರ್ಯಕರ್ತರಿಗೆ ಮೋದಿ ಕೊಡಲಿದ್ದಾರೆ 'ಬೂಸ್ಟರ್‌' ಡೋಸ್!

ಬೆಂಗಳೂರು (ಆ.23): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳಿವೆ. ಇದರ ನಡುವೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ. ಕರಾವಳಿ ಕರ್ನಾಟಕದಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆಯಿಂದ ಸಿಟ್ಟಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಲು ರಾಜ್ಯ ಬಿಜೆಪಿ ಸಜ್ಜಾಗಿದೆ.

ವಿಧಾನಸಭೆ ಚುನಾವಣೆಗೆ ತಾವು ಸಿದ್ಧ ಎನ್ನುವ ಸಂದೇಶವನ್ನು ಬಿಜೆಪಿ ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸೆ. 2 ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್‌ ಸಮಾವೇಶವನ್ನು ನಡೆಸಲು ಮುಂದಾಗಿದೆ. ಚುನಾವಣೆಗೆ ರಣಕಹಳೆಯನ್ನು ಕರಾವಳಿಯಿಂದಲೇ ಮೊಳಗಿಸಲು ಬಿಜೆಪಿ ಸಿದ್ಧತೆ ಮಾಡುವುದರೊಂದಿಗೆ ಇತ್ತೀಚಿನ ಕೆಲವು ಘಟನೆಗಳ ಬಳಿಕ ಬಳಿಕ ಸಿಟ್ಟಾಗಿರುವ ತನ್ನ ಕಾರ್ಯಕರ್ತರ ಸಮಾಧಾನ ಮಾಡಲು ಈ ಸಮಾವೇಶವನ್ನು ಬಳಸಿಕೊಳ್ಳಲಿದೆ.

ಮೊಟ್ಟೆಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರು ಪ್ರಾಧಿಕಾರದ ಕೆಲ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿ ಸೆ.2 ರಂದು ಮಂಗಳೂರಿಗೆ ಬರಲಿದ್ದಾರೆ. ಪ್ರಧಾನಿ ಭೇಟಿಯನ್ನು ಬೂಸ್ಟರ್‌ ಡೋಸ್‌ ಆಗಿ ಬಳಸಿಕೊಳ್ಳುವ ಇರಾದೆಯಲ್ಲಿ ಬಿಜೆಪಿ ಇದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more