ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

Published : Aug 23, 2022, 01:38 PM IST

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿರುವ ಹಿನ್ನೆಲೆ, ಕೇಸರಿಪಡೆಯು ಕರಾವಳಿಯಿಂದಲೇ ರಣಕಹಳೆ ಮೊಳಗಿಸಲು ಪ್ಲಾನ್ ಮಾಡಿದೆ. ಇತ್ತೀಚಿಗಿನ ಬೆಳವಣಿಗೆಗಳಿಂದ ಗರಂ ಆಗಿರುವ ಕಾರ್ಯಕರ್ತರಿಗೆ ಮೋದಿ ಕೊಡಲಿದ್ದಾರೆ 'ಬೂಸ್ಟರ್‌' ಡೋಸ್!

ಬೆಂಗಳೂರು (ಆ.23): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳಿವೆ. ಇದರ ನಡುವೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ. ಕರಾವಳಿ ಕರ್ನಾಟಕದಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆಯಿಂದ ಸಿಟ್ಟಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಲು ರಾಜ್ಯ ಬಿಜೆಪಿ ಸಜ್ಜಾಗಿದೆ.

ವಿಧಾನಸಭೆ ಚುನಾವಣೆಗೆ ತಾವು ಸಿದ್ಧ ಎನ್ನುವ ಸಂದೇಶವನ್ನು ಬಿಜೆಪಿ ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸೆ. 2 ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್‌ ಸಮಾವೇಶವನ್ನು ನಡೆಸಲು ಮುಂದಾಗಿದೆ. ಚುನಾವಣೆಗೆ ರಣಕಹಳೆಯನ್ನು ಕರಾವಳಿಯಿಂದಲೇ ಮೊಳಗಿಸಲು ಬಿಜೆಪಿ ಸಿದ್ಧತೆ ಮಾಡುವುದರೊಂದಿಗೆ ಇತ್ತೀಚಿನ ಕೆಲವು ಘಟನೆಗಳ ಬಳಿಕ ಬಳಿಕ ಸಿಟ್ಟಾಗಿರುವ ತನ್ನ ಕಾರ್ಯಕರ್ತರ ಸಮಾಧಾನ ಮಾಡಲು ಈ ಸಮಾವೇಶವನ್ನು ಬಳಸಿಕೊಳ್ಳಲಿದೆ.

ಮೊಟ್ಟೆಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರು ಪ್ರಾಧಿಕಾರದ ಕೆಲ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿ ಸೆ.2 ರಂದು ಮಂಗಳೂರಿಗೆ ಬರಲಿದ್ದಾರೆ. ಪ್ರಧಾನಿ ಭೇಟಿಯನ್ನು ಬೂಸ್ಟರ್‌ ಡೋಸ್‌ ಆಗಿ ಬಳಸಿಕೊಳ್ಳುವ ಇರಾದೆಯಲ್ಲಿ ಬಿಜೆಪಿ ಇದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more