ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

ಮಂಗಳೂರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ, ಮೋದಿಯಿಂದ 'ಬೂಸ್ಟರ್‌ ಡೋಸ್'

Published : Aug 23, 2022, 01:38 PM IST

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಉಳಿದಿರುವ ಹಿನ್ನೆಲೆ, ಕೇಸರಿಪಡೆಯು ಕರಾವಳಿಯಿಂದಲೇ ರಣಕಹಳೆ ಮೊಳಗಿಸಲು ಪ್ಲಾನ್ ಮಾಡಿದೆ. ಇತ್ತೀಚಿಗಿನ ಬೆಳವಣಿಗೆಗಳಿಂದ ಗರಂ ಆಗಿರುವ ಕಾರ್ಯಕರ್ತರಿಗೆ ಮೋದಿ ಕೊಡಲಿದ್ದಾರೆ 'ಬೂಸ್ಟರ್‌' ಡೋಸ್!

ಬೆಂಗಳೂರು (ಆ.23): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳಿವೆ. ಇದರ ನಡುವೆ ಮಂಗಳೂರಿನಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ. ಕರಾವಳಿ ಕರ್ನಾಟಕದಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆಯಿಂದ ಸಿಟ್ಟಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಲು ರಾಜ್ಯ ಬಿಜೆಪಿ ಸಜ್ಜಾಗಿದೆ.

ವಿಧಾನಸಭೆ ಚುನಾವಣೆಗೆ ತಾವು ಸಿದ್ಧ ಎನ್ನುವ ಸಂದೇಶವನ್ನು ಬಿಜೆಪಿ ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸೆ. 2 ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್‌ ಸಮಾವೇಶವನ್ನು ನಡೆಸಲು ಮುಂದಾಗಿದೆ. ಚುನಾವಣೆಗೆ ರಣಕಹಳೆಯನ್ನು ಕರಾವಳಿಯಿಂದಲೇ ಮೊಳಗಿಸಲು ಬಿಜೆಪಿ ಸಿದ್ಧತೆ ಮಾಡುವುದರೊಂದಿಗೆ ಇತ್ತೀಚಿನ ಕೆಲವು ಘಟನೆಗಳ ಬಳಿಕ ಬಳಿಕ ಸಿಟ್ಟಾಗಿರುವ ತನ್ನ ಕಾರ್ಯಕರ್ತರ ಸಮಾಧಾನ ಮಾಡಲು ಈ ಸಮಾವೇಶವನ್ನು ಬಳಸಿಕೊಳ್ಳಲಿದೆ.

ಮೊಟ್ಟೆಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪಣಂಬೂರಿನಲ್ಲಿರುವ ನವ ಮಂಗಳೂರು ಬಂದರು ಪ್ರಾಧಿಕಾರದ ಕೆಲ ಕಾರ್ಯಕ್ರಮಗಳ ಉದ್ಘಾಟನೆಗೆ ಪ್ರಧಾನಿ ಮೋದಿ ಸೆ.2 ರಂದು ಮಂಗಳೂರಿಗೆ ಬರಲಿದ್ದಾರೆ. ಪ್ರಧಾನಿ ಭೇಟಿಯನ್ನು ಬೂಸ್ಟರ್‌ ಡೋಸ್‌ ಆಗಿ ಬಳಸಿಕೊಳ್ಳುವ ಇರಾದೆಯಲ್ಲಿ ಬಿಜೆಪಿ ಇದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more