ಹಿಂದೂ ಮುಖಂಡ ಅರುಣ್‌ ಪುತ್ತಿಲ ಬಗ್ಗೆ ನಳಿನ್ ಕುಮಾರ್‌ ಫಸ್ಟ್‌ ರಿಯಾಕ್ಷನ್!

ಹಿಂದೂ ಮುಖಂಡ ಅರುಣ್‌ ಪುತ್ತಿಲ ಬಗ್ಗೆ ನಳಿನ್ ಕುಮಾರ್‌ ಫಸ್ಟ್‌ ರಿಯಾಕ್ಷನ್!

Published : Jul 14, 2023, 11:36 PM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಹಿಂದೂ ಮುಖಂಡ ಅರುಣ್‌ ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದಕ್ಷಿಣ ಕನ್ನಡ (ಜು.14): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಪೈಪೋಟಿ ನೀಡಿ ಸೋಲನ್ನಪ್ಪಿದ ಹಾಗೂ ಲೋಕಸಭಾ ಚುನಾವಣೆಯ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ಬಿಜೆಪಿಗೆ ಮರಳಿ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮೊದಲ ಬಾರಿಗೆ ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ  ನೀಡಿದ್ದಾರೆ.

ಮಾಧ್ಯಮಗಳೊಂದಿಗ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಪುತ್ತೂರು ಅಥವಾ ಎಲ್ಲೂ ಬಿಜೆಪಿಯಲ್ಲಿ ಗೊಂದಲಗಳು ಆಗಿಲ್ಲ. ಪಕ್ಷೇತರ ಅಭ್ಯರ್ಥಿಗಳು ನಿಂತ ಕಾರಣ ಚುನಾವಣೆಯಲ್ಲಿ ವ್ಯತ್ಯಾಸಗಳಾಗಿವೆ. ಯಾರು ಯಾರು ಪಕ್ಷಕ್ಕೆ ಬರಬೇಕೋ ಪಕ್ಷದಲ್ಲಿ ಇರಬೇಕೋ ನಾವು ಅದನ್ನ ಸರಿ ಮಾಡ್ತೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಕೆಲಸ ಮಾಡ್ತೇವೆ. ನಾವು ರಾಷ್ಟ್ರೀಯ ಪಕ್ಷವಾಗಿ ಅಭ್ಯರ್ಥಿಗಳನ್ನು ಹಾಕ್ತೇವೆ. ಜಾಪ್ರಭುತ್ವದಲ್ಲಿ ಯಾರೂ ಸ್ಪರ್ಧೆ ಮಾಡಬಹುದು. ಅರುಣ್ ಪುತ್ತಿಲ ಅವರ ಬಗ್ಗೆ ವೈಯಕ್ತಿಕವಾಗಿ ಚರ್ಚೆ ಮಾಡಲ್ಲ ಎಂದು ಹೇಳಿದರು.

ಈಗಾಗಲೇ ರಾಷ್ಟ್ರೀಯ ನಾಯಕರ ಜೊತೆ ಅರುಣ್‌ ಕುಮಾರ್‌ ಪುತ್ತಿಲ ಅವರ ಬಗ್ಗೆ ಚರ್ಚೆಗಳು ಆಗಿವೆ. ಆ ಚರ್ಚೆಯ ಉತ್ತರಗಳನ್ನು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ. ಎಲ್ಲ ನೋಡಿಕೊಂಡು ರಾಷ್ಟ್ರೀಯ ನಾಯಕರು, ರಾಜ್ಯದಲ್ಲಿ ವಿಪಕ್ಷ ನಾಯಕರನ್ನೂ ಆಯ್ಕೆ ಮಾಡ್ತಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆ ಆಗಿರುವ 66 ಜನರೂ ಕೂಡ ಸರ್ಕಾರದ ವಿರೋಧ ಪಕ್ಷದ ನಾಯಕನಾಗಲು ಸಮರ್ಥರಿದ್ದಾರೆ ಎಂದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more