ಮಂತ್ರಿಸ್ಥಾನ ತಪ್ಪಿದ್ದೇ “ಹರಿ” ಕಥೆ  "ಉರಿ"ಕಥೆಗೆ ಕಾರಣವಾಯ್ತಾ..?: ಕಿಚ್ಚಿಗೆ ತುಪ್ಪ ಸುರಿದ ಕೇಸರಿ ಕಲಿಗಳು..!

ಮಂತ್ರಿಸ್ಥಾನ ತಪ್ಪಿದ್ದೇ “ಹರಿ” ಕಥೆ "ಉರಿ"ಕಥೆಗೆ ಕಾರಣವಾಯ್ತಾ..?: ಕಿಚ್ಚಿಗೆ ತುಪ್ಪ ಸುರಿದ ಕೇಸರಿ ಕಲಿಗಳು..!

Published : Jul 23, 2023, 12:10 PM IST

ಸಿಎಂ ಸಿದ್ದು ವಿರೋಧಿ ಬಣದ ಮೊದಲ ಕಿಡಿ ಸ್ಫೋಟ..!
ಸಿದ್ದರಾಮಯ್ಯ ವಿರುದ್ಧ ಸಿಡಿದದ್ದೇಕೆ ಕಟ್ಟರ್ ಕಾಂಗ್ರೆಸ್ಸಿಗ ?
ಮಂತ್ರಿಸ್ಥಾನ ತಪ್ಪಿದ್ದೇ ಹರಿಪ್ರಸಾದ್ ಆಕ್ರೋಶಕ್ಕೆ ಕಾರಣನಾ..?

ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ರಾಜಕೀಯ ಕುಸ್ತಿ ಅಖಾಡದ ಪೈಲ್ವಾನನೂ ಹೌದು, ರಣಸಾಹಸ ಗಟ್ಟಿಗನೂ ಹೌದು. ಸಿದ್ದು ಹಾಕೋ ಪಟ್ಟುಗಳು ಅದೆಷ್ಟು ಇಂಟ್ರೆಸ್ಟಿಂಗ್ ಅಂದ್ರೆ, ಆ ಪಟ್ಟುಗಳ ಮುಂದೆ  ಜಟ್ಟಿಗಳು ನೆಲಕ್ಕುರುಳೋದೋ ಗೊತ್ತಾಗಲ್ಲ. ಇನ್ನು ರಾಜಕೀಯ ಪಗಡೆಯಾಟದಲ್ಲೂ ಸಿದ್ದರಾಮಯ್ಯನವರದ್ದು ಎತ್ತಿದ ಕೈ. ದೇವೇಗೌಡ್ರಂಥಾ ದೇವೇಗೌಡ್ರನ್ನೇ ಎದುರು ಹಾಕೊಂಡು ರಾಜಕೀಯ ಮಾಡಿದವರು. ಕಾಂಗ್ರೆಸ್(Congress) ಸೇರಿದ್ಮೇಲೆ ಅತಿರಥ ಮಹಾರಥಿಗಳನ್ನೇ ಮೀರಿಸಿ ಎರಡೆರಡು ಬಾರಿ ಮುಖ್ಯಮಂತ್ರಿ ಆದರು. ರಾಜ್ಯ ರಾಜಕಾರಣದ ಮಹಾವೀರ, ಮಹಾಚತುರ, ಅತಿ ಬಲಿಷ್ಠ ನಾಯಕ ಸಿದ್ದರಾಮಯ್ಯನವರನ್ನು ಎದುರಿಸಿ ನಿಲ್ಲೋದಕ್ಕೆ ಎಂಟೆದೆ ಬೇಕು. ಆ ಎಂಟೆದೆಯನ್ನು ತೋರಿಸೋ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ(BJP) ಇನ್ನೂ ಆಯ್ಕೆ ಮಾಡಿಲ್ಲ. ಆದ್ರೂ ಬಿಜೆಪಿ ನಾಯಕರು ಒಳಗೊಳಗೇ ಹಾಲು ಕುಡಿದಷ್ಟೇ ಖುಷಿಯಲ್ಲಿದ್ದಾರೆ. ಕಾರಣ ಏನ್ ಗೊತ್ತಾ, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ನಲ್ಲೇ ವಿರೋಧ ಪಕ್ಷದ ನಾಯಕರೊಬ್ಬರು ಹುಟ್ಟಿಕೊಂಡಿದ್ದಾರೆ. ಸಿದ್ದು ಮುಖ್ಯಮಂತ್ರಿಯಾಗಿ ಎರಡು ತಿಂಗಳು ಪೂರ್ತಿಯಾದ ಬೆನ್ನಲ್ಲೇ ಅವ್ರು ಸಿದ್ದರಾಮಯ್ಯ ವಿರುದ್ಧ ಸಿಡಿದು ನಿಂತಿದ್ದಾರೆ. ಅಂದ ಹಾಗೆ ಅವ್ರ ಹೆಸರು ಬಿ.ಕೆ ಹರಿಪ್ರಸಾದ್.

ಇದನ್ನೂ ವೀಕ್ಷಿಸಿ:  ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more