ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

Published : May 02, 2022, 04:32 PM ISTUpdated : May 02, 2022, 04:44 PM IST

ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಬಿ ಎಲ್ ಸಂತೋಷ್ ನೀಡಿದ  ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

ಬೆಂಗಳೂರು (ಮೇ. 02): ಮೈಸೂ​ರಿನ (Mysuru) ರಿಯೋ ಮೆರೀಡಿಯನ್‌ ಹೋಟೆಲ್‌ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್‌. ಸಂತೋಷ್‌ (BL Santosh) ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು' ಎಂದಿದ್ದಾರೆ. 

 ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಪಕ್ಷದ ರಾಷ್ಟ್ರೀಯ ಮುಖಂಡ​ರೊಬ್ಬರು ನೀಡಿದ ಈ ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!