ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

Published : May 02, 2022, 04:32 PM ISTUpdated : May 02, 2022, 04:44 PM IST

ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಬಿ ಎಲ್ ಸಂತೋಷ್ ನೀಡಿದ  ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

ಬೆಂಗಳೂರು (ಮೇ. 02): ಮೈಸೂ​ರಿನ (Mysuru) ರಿಯೋ ಮೆರೀಡಿಯನ್‌ ಹೋಟೆಲ್‌ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್‌. ಸಂತೋಷ್‌ (BL Santosh) ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು' ಎಂದಿದ್ದಾರೆ. 

 ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಪಕ್ಷದ ರಾಷ್ಟ್ರೀಯ ಮುಖಂಡ​ರೊಬ್ಬರು ನೀಡಿದ ಈ ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ